ಬ್ರೇಕಿಂಗ್ ನ್ಯೂಸ್
27-10-21 08:32 pm Mangaluru Correspondent ಕ್ರೈಂ
ಪುತ್ತೂರು, ಅ.27 : ಅಪ್ರಾಪ್ತ ದಲಿತ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಮಗುವಿಗೆ ಜನ್ಮ ನೀಡಲು ಕಾರಣ ಎಂಬ ಆರೋಪಕ್ಕೀಡಾಗಿರುವ ಬಿಜೆಪಿ ಮುಖಂಡ, 70 ವರ್ಷದ ಕುದ್ಕಾಡಿ ನಾರಾಯಣ ರೈ ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ.
17ರ ಹರೆಯದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ನಿರಂತರ ಅತ್ಯಾಚಾರಕ್ಕೀಡಾಗಿ ಕಳೆದ ಸೆಪ್ಟೆಂಬರ್ 5 ರಂದು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ತನ್ನನ್ನು ದುರುಪಯೋಗ ಪಡಿಸಿದ ನಾರಾಯಣ ರೈ ವಿರುದ್ಧ ಆರೋಪಿಸಿ ದೂರು ನೀಡಿದ್ದಳು. ಆದರೆ, ಪೊಲೀಸರು ಸಂತ್ರಸ್ತೆಯ ಸಹೋದರನನ್ನೆ ಈ ಪ್ರಕರಣದ ಆರೋಪಿ ಎಂದು ಬಂಧಿಸಿದ್ದರು. ಆದರೆ ಆ ಬಳಿಕ ಬಾಲಕಿ ಮತ್ತು ದಲಿತ ಸಂಘಟನೆಯವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ನಾರಾಯಣ ರೈ ಕಾರಣ ಎಂದು ಆರೋಪಿಸಿದ್ದರು. ಅಲ್ಲದೆ, ಡಿಎನ್ಎ ಟೆಸ್ಟ್ ಮಾಡುವಂತೆ ಸವಾಲು ಹಾಕಿದ್ದರು.

ಈ ನಡುವೆ, ಆರೋಪಿ ನಾರಾಯಣ ರೈ ಬಂಧನದ ಭೀತಿಯಿಂದ ತಲೆಮರೆಸಿಕೊಂಡು, ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ಅರ್ಜಿ ಕೋರ್ಟ್ ವಜಾ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆಯ ವಿರುದ್ದ ಪ್ರತಿಭಟನೆ ಎಚ್ಚರಿಕೆ ನೀಡಿದ್ದರು.
ಆನಂತರದ ಬೆಳವಣಿಗೆಯಲ್ಲಿ ನಾರಾಯಣ ರೈ ಇಂದು ದಿಢೀರ್ ಆಗಿ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ನಾರಾಯಣ ರೈಯನ್ನು ಎರಡು ದಿನ ಪೋಲೀಸ್ ಕಸ್ಟಡಿಗೆ ನೀಡಿದ್ದಾರೆ.
ದಲಿತ ಬಾಲಕಿ ಮೇಲೆ ಅತ್ಯಾಚಾರ ; ಆರೆಸ್ಸೆಸ್ ಮುಖಂಡನ ವಿರುದ್ಧ ಆರೋಪ, ಬಂಧನಕ್ಕೆ ಆಗ್ರಹ
Puttur Rss Leader Narayana Rai who raped a minor girl belonging to the Dalit community who used to work on his farm in Badagannur village, Puttur taluk has surrendered himself to the court. The organization demanded for the immediate arrest of Rai, in-depth investigation by considering this as a special case, initiation of legal action against the Puttur rural police personnel, conducting DNA tests of the accused and the aggrieved girl. The leaders also warned that if there is delay in meeting these demands, the organization will arrange for holding a protest in front of Puttur rural police station at Sampya.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm