ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm