ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.
ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm