ಬ್ರೇಕಿಂಗ್ ನ್ಯೂಸ್
01-11-21 07:27 pm Headline Karnataka News Desk ಕ್ರೈಂ
Photo credits : LIVE LAW
ಭರತ್ ಪುರ, ನ.1: ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ಸ್ಪೆಷಲ್ ಜಡ್ಜ್ ಎಂದು ನೇಮಕಗೊಂಡಿದ್ದ ವ್ಯಕ್ತಿ ಮತ್ತು ಇತರರು ಸೇರಿ 14 ವರ್ಷದ ಬಾಲಕನಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು, ಆರೋಪಿ ಸ್ಪೆಷಲ್ ಜಡ್ಜ್ ನನ್ನು ಹುದ್ದೆಯಿಂದ ಅಮಾನತುಗೊಳಿಸಿದ್ದಾರೆ. ಅಲ್ಲದೆ, ಇಲಾಖಾ ತನಿಖೆಗೆ ಆದೇಶ ಮಾಡಿದ್ದಾರೆ. ಬಾಲಕನ ತಾಯಿ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
14 ವರ್ಷದ ಬಾಲಕ ಸ್ಟೇಡಿಯಂಗೆ ಟೆನಿಸ್ ಆಡಲೆಂದು ಹೋಗುತ್ತಿದ್ದ. ಅಲ್ಲಿಗೆ ಜಡ್ಜ್, ಪೊಲೀಸ್ ಅಧಿಕಾರಿಗಳು ಕೂಡ ಅಲ್ಲಿಗೆ ಆಟ ಆಡುವುದಕ್ಕೆ ಬರುತ್ತಿದ್ದರು. ಈ ವೇಳೆ, ಹೊಸತಾಗಿ ಬಂದಿದ್ದ ಜಡ್ಜ್ ಗೆ ಬಾಲಕನ ಪರಿಚಯವಾಗಿದ್ದು, ತಿಂಗಳ ಹಿಂದೆ ಬಾಲಕನನ್ನು ತನ್ನ ಮನೆಗೆ ಕರೆದೊಯ್ದಿದ್ದ. ಅಲ್ಲಿ ಯಾವುದೋ ಮಾದಕ ವಸ್ತುವನ್ನು ನೀಡಿ, ಆತನ ಜೊತೆ ಸೆಕ್ಸ್ ನಡೆಸಿದ್ದಾನೆ. ಆನಂತರ, ಆಮಿಷ ಮತ್ತು ಬೆದರಿಕೆ ಒಡ್ಡಿ ಈ ಬಗ್ಗೆ ಯಾರಿಗೂ ಹೇಳದಂತೆ ಒತ್ತಡ ಹೇರಿದ್ದ.
ಆದರೆ, ಕಳೆದ ಒಂದು ತಿಂಗಳಲ್ಲಿ ಇದೇ ರೀತಿ ಮತ್ತೆ ಮತ್ತೆ ಬಾಲಕನನ್ನು ಮೂವರು ಸೇರಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದರಿಂದ ಬಾಲಕನಿಗೆ ನೋವು ಉಂಟಾಗಿತ್ತು. ತಾಯಿ ಮನೆಯಲ್ಲಿ ಬಾಲಕನ ನೋವಿನ ಬಗ್ಗೆ ಪ್ರಶ್ನೆ ಮಾಡಿದಾಗ, ಆತ ನಿಜ ವಿಚಾರವನ್ನು ಹೇಳಿದ್ದಾನೆ. ನೊಂದ ತಾಯಿ ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಜಡ್ಜ್ ಮತ್ತು ಇತರರ ವಿರುದ್ಧ ದೂರು ನೀಡಿದ್ದಾರೆ. ಈ ನಡುವೆ, ಜಡ್ಜ್ ಮತ್ತು ಎಸಿಬಿ ಅಧಿಕಾರಿಯೊಬ್ಬ ತಾಯಿ ಮತ್ತು ಮಗನಿಗೆ ಬೆದರಿಕೆ ಒಡ್ಡಿದ್ದು ಕೊಂದು ಹಾಕುವುದಾಗಿ ಬೆದರಿಸಿದ್ದಾರೆ.
ಇದಲ್ಲದೆ, ಜಡ್ಜ್ ತನ್ನ ತಪ್ಪನ್ನು ಕ್ಷಮಿಸುವಂತೆ ಹೇಳಿ ತಾಯಿ ಬಳಿ ಕೇಳಿಕೊಳ್ಳುವ ವಿಡಿಯೋ ಕೂಡ ಇದೇ ವೇಳೆ ವೈರಲ್ ಆಗಿದೆ. ಜಡ್ಜ್, ಎಸಿಬಿ ಅಧಿಕಾರಿ ಮತ್ತು ಇನ್ನೊಬ್ಬನ ವಿರುದ್ಧ ತಾಯಿ ದೂರು ನೀಡಿದ್ದು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
A special judge posted in Rajasthan's Bharatpur district has been booked along with two others for allegedly gang-raping a 14-year-old boy, the police said on Sunday. An Anti-Corruption Bureau (ACB) officer was also placed under Awaiting Posting Order (APO) for allegedly threatening the boy.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm