ಬ್ರೇಕಿಂಗ್ ನ್ಯೂಸ್
04-11-21 09:42 am Mangaluru Correspondent ಕ್ರೈಂ
ಮಂಗಳೂರು, ನ.4: ಕ್ಷುಲ್ಲಕ ವಿಚಾರದಲ್ಲಿ ಜಗಳ ನಡೆದು ತಂದೆ, ಮಗ ಸೇರಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಥಬೀದಿಯ ಮಹಮ್ಮಾಯಿ ದೇವಸ್ಥಾನದ ಬಳಿಯ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿವಾಸಿ, ವಿಕ್ರಮ್ ಟ್ರಾವೆಲ್ಸ್ ಕಂಪನಿಯ ಟೂರ್ ಮ್ಯಾನೇಜರ್ ಆಗಿದ್ದ ವಿನಾಯಕ ಕಾಮತ್ (46) ಕೊಲೆಯಾದವರು.
ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ಕೃಷ್ಣಾನಂದ ಕಿಣಿ (68) ಮತ್ತು ಅವರ ಮಗ ಅವಿನಾಶ್ (32) ಸೇರಿಕೊಂಡು ನಿನ್ನೆ ರಾತ್ರಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾರೆ. 4-5 ದಿನಗಳ ಹಿಂದೆ, ಅಪಾರ್ಟ್ಮೆಂಟ್ ಮುಂದುಗಡೆ ಮಹಾನಗರ ಪಾಲಿಕೆ ವತಿಯಿಂದ ಕಾಂಕ್ರೀಟ್ ಹಾಕಲಾಗಿತ್ತು. ಅದರ ಮೇಲಿಂದ ಕಾರು ಒಯ್ಯುವ ವಿಚಾರದಲ್ಲಿ ಜಗಳ ನಡೆದಿದ್ದು ಇವರೊಳಗೆ ಮಾತಿಗೆ ಮಾತಾಗಿ ಜಗಳ ಆಗಿತ್ತು. ಈ ಹಿಂದೆಯೂ ಕೃಷ್ಣಾನಂದ ಕಿಣಿ ಹಳೆ ದ್ವೇಷ ಇಟ್ಟುಕೊಂಡಿದ್ದು ವಿನಾಯಕ ಕಾಮತ್ ವಿರುದ್ಧ ಜಗಳವಾಡುತ್ತಿದ್ದರು.

ನಿನ್ನೆ ರಾತ್ರಿ ಅಪಾರ್ಟ್ಮೆಂಟ್ ನಿವಾಸಿಗಳು ಕೆಳಗಡೆ ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸುತ್ತಿದ್ದು ವಿನಾಯಕ ಕಾಮತ್ ಕೂಡ ಅಲ್ಲಿಗೆ ತೆರಳಿದ್ದರು. ಈ ವೇಳೆ, ಇಬ್ಬರ ಮಧ್ಯೆ ಮತ್ತೆ ಜಗಳ ತೆಗೆದಿದ್ದು ಮಾತಿಗೆ ಮಾತಾಗಿತ್ತು. ಇತರೇ ನಿವಾಸಿಗಳು ನೋಡುತ್ತಿದ್ದಂತೆಯೇ ವಿನಾಯಕ ಕಾಮತ್ ಮೇಲೆ, ಕೃಷ್ಣಾನಂದ ಕಿಣಿ ಮತ್ತು ಅವರ ಮಗ ಅವಿನಾಶ್ ಕಾಮತ್ ಚೂರಿಯಿಂದ ದಾಳಿ ನಡೆಸಿದ್ದಾರೆ. ಇದನ್ನು ವಿನಾಯಕ ಕಾಮತ್ ಮತ್ತು ಪತ್ನಿ ಬಂದು ನೋಡಿದ್ದು ಕುಸಿದು ಬಿದ್ದ ವಿನಾಯಕ ಅವರನ್ನು ಕೂಡಲೇ ಇತರ ನಿವಾಸಿಗಳ ಸಹಾಯ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದರು. ರಾತ್ರಿ ಸುಮಾರು 1.40 ಕ್ಕೆ ವಿನಾಯಕ ಕಾಮತ್ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ.
ಈ ಬಗ್ಗೆ ವಿನಾಯಕ ಕಾಮತ್ ಪತ್ನಿ ಬಂದರು ಠಾಣೆಯಲ್ಲಿ ದೂರು ನೀಡಿದ್ದು ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ತಂದೆ - ಮಗನನ್ನು ಪೊಲೀಸರು ಬಂಧಿಸಿದ್ದಾರೆ.
Amani Kamath (35), resident of Veera Venkatesh Apartment on Mahamayi temple road, in the city, has alleged that her husband Vinayak Kamath, was murdered by Krishnananda Kini and his son Avinash Kini, residing in the same complex. Amani stated in her complaint made to the city (north) police station that she has been a resident of flat No 108 of the said complex for the last five years. Her husband, son and mother-in-law are the other residents of this flat. She does tailoring jobs and her husband was a tour manager of Vikram Travels here.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm