ಬ್ರೇಕಿಂಗ್ ನ್ಯೂಸ್
04-11-21 07:36 pm Headline Karnataka News Desk ಕ್ರೈಂ
ಮೈಸೂರು, ನ.4: ಇಡೀ ದೇಶ ದೀಪಾವಳಿ ಸಂಭ್ರಮದಲ್ಲಿದ್ದರೆ, ಆ ಮಗು ಕೂಡ ಹಬ್ಬಕ್ಕೆ ಪಟಾಕಿ ತರೋದಿಕ್ಕೆ ಹೋಗಿತ್ತು. ಆದರೆ ಪಟಾಕಿ ತರಲು ಹೊರಟಿದ್ದ ಮಗು ಮನೆಗೆ ಬಂದಿರಲಿಲ್ಲ. ಪಟಾಕಿಗೆಂದು ತೆರಳಿದ್ದ ಬಾಲಕನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟು ಕೊನೆಗೆ ಕೊಂದು ಬಿಸಾಡಿದ್ದಾರೆ.
ದೀಪಾವಳಿ ಗುಂಗಿನಲ್ಲಿದ್ದ ಹುಣಸೂರು ತಾಲೂಕಿನ ಹನಗೋಡಿನಲ್ಲಿ ದುರಂತವೇ ನಡೆದುಹೋಗಿದೆ. ಹನಗೋಡು ನಿವಾಸಿ, ತರಕಾರಿ ಉದ್ಯಮಿ ನಾಗರಾಜ್ ಅವರ ಹತ್ತು ವರ್ಷದ ಪುತ್ರ ಕಾರ್ತಿಕ್ ದುಷ್ಕರ್ಮಿಗಳ ಕೈಗೆ ಸಿಕ್ಕಿ ದುರಂತ ಸಾವು ಕಂಡಿದ್ದಾನೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ಪೋಷಕರಿಂದ 10-15 ರೂ. ಪಡೆದುಕೊಂಡು ಪಟಾಕಿ ತರಲು ಹೊರಟಿದ್ದ. ಈ ವೇಳೆ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.



ರಾತ್ರಿಯೇ ಕಾರ್ತಿಕ್ ತಂದೆ ನಾಗರಾಜ್ಗೆ ಕರೆ ಮಾಡಿದ್ದ ಕಿಡ್ನಾಪರ್ಗಳು, ನಿನ್ನ ಮಗ ನಮ್ಮೊಟ್ಟಿಗೆ ಇದ್ದಾನೆ. ಮಗ ಜೀವಂತವಾಗಿ ಬೇಕಿದ್ದರೆ 4 ಲಕ್ಷ ರೂ. ತೆಗೆದುಕೊಂಡು ಹುಣಸೂರಿಗೆ ಬಾ ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಮತ್ತೆ ಕರೆ ಮಾಡಿದಾಗ ಕಿಡ್ನಾಪರ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಬಾಲಕನ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಎಎಸ್ಪಿ ಶಿವಕುಮಾರ್ ಮತ್ತು ತಂಡ ರಾತ್ರಿಯೇ ಹುಣಸೂರಿಗೆ ತೆರಳಿ ತಲಾಷ್ ಶುರು ಮಾಡಿತ್ತು. ಮೂರು ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಆದರೆ, ಇಂದು ಮಧ್ಯಾಹ್ನದ ಹೊತ್ತಿಗೆ ಆರೋಪಿ ಸಿಕ್ಕಿದ್ದು ಮಗು ಜೀವಂತ ಇರಲಿಲ್ಲ.
ಪಕ್ಕದ ಊರಿನ ನಿವಾಸಿಯೇ ಆರೋಪಿಯಾಗಿದ್ದು ಹನಗೋಡು ಹೋಬಳಿಯ ದಾಸನಪುರ ನಿವಾಸಿ ಜವರಯ್ಯ ಬಂಧಿತ. ಈತನ ಜೊತೆ ಐದಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜವರಯ್ಯ ಹಣದಾಸೆಗಾಗಿ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಪೊಲೀಸರ ಭಯದಿಂದ ಕೊಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kidnap for ransom 9 year boy murdered in Mysuru. Kidnappers who had demanded a ransom of Rs 4 lakh from his father. Later his body was found near Kunterikere in Hunsur on Thursday. He was found murdered and the body was thrown inside a bush.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm