ಬ್ರೇಕಿಂಗ್ ನ್ಯೂಸ್
04-11-21 07:36 pm Headline Karnataka News Desk ಕ್ರೈಂ
ಮೈಸೂರು, ನ.4: ಇಡೀ ದೇಶ ದೀಪಾವಳಿ ಸಂಭ್ರಮದಲ್ಲಿದ್ದರೆ, ಆ ಮಗು ಕೂಡ ಹಬ್ಬಕ್ಕೆ ಪಟಾಕಿ ತರೋದಿಕ್ಕೆ ಹೋಗಿತ್ತು. ಆದರೆ ಪಟಾಕಿ ತರಲು ಹೊರಟಿದ್ದ ಮಗು ಮನೆಗೆ ಬಂದಿರಲಿಲ್ಲ. ಪಟಾಕಿಗೆಂದು ತೆರಳಿದ್ದ ಬಾಲಕನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟು ಕೊನೆಗೆ ಕೊಂದು ಬಿಸಾಡಿದ್ದಾರೆ.
ದೀಪಾವಳಿ ಗುಂಗಿನಲ್ಲಿದ್ದ ಹುಣಸೂರು ತಾಲೂಕಿನ ಹನಗೋಡಿನಲ್ಲಿ ದುರಂತವೇ ನಡೆದುಹೋಗಿದೆ. ಹನಗೋಡು ನಿವಾಸಿ, ತರಕಾರಿ ಉದ್ಯಮಿ ನಾಗರಾಜ್ ಅವರ ಹತ್ತು ವರ್ಷದ ಪುತ್ರ ಕಾರ್ತಿಕ್ ದುಷ್ಕರ್ಮಿಗಳ ಕೈಗೆ ಸಿಕ್ಕಿ ದುರಂತ ಸಾವು ಕಂಡಿದ್ದಾನೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ಪೋಷಕರಿಂದ 10-15 ರೂ. ಪಡೆದುಕೊಂಡು ಪಟಾಕಿ ತರಲು ಹೊರಟಿದ್ದ. ಈ ವೇಳೆ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.
ರಾತ್ರಿಯೇ ಕಾರ್ತಿಕ್ ತಂದೆ ನಾಗರಾಜ್ಗೆ ಕರೆ ಮಾಡಿದ್ದ ಕಿಡ್ನಾಪರ್ಗಳು, ನಿನ್ನ ಮಗ ನಮ್ಮೊಟ್ಟಿಗೆ ಇದ್ದಾನೆ. ಮಗ ಜೀವಂತವಾಗಿ ಬೇಕಿದ್ದರೆ 4 ಲಕ್ಷ ರೂ. ತೆಗೆದುಕೊಂಡು ಹುಣಸೂರಿಗೆ ಬಾ ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಮತ್ತೆ ಕರೆ ಮಾಡಿದಾಗ ಕಿಡ್ನಾಪರ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಬಾಲಕನ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಎಎಸ್ಪಿ ಶಿವಕುಮಾರ್ ಮತ್ತು ತಂಡ ರಾತ್ರಿಯೇ ಹುಣಸೂರಿಗೆ ತೆರಳಿ ತಲಾಷ್ ಶುರು ಮಾಡಿತ್ತು. ಮೂರು ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಆದರೆ, ಇಂದು ಮಧ್ಯಾಹ್ನದ ಹೊತ್ತಿಗೆ ಆರೋಪಿ ಸಿಕ್ಕಿದ್ದು ಮಗು ಜೀವಂತ ಇರಲಿಲ್ಲ.
ಪಕ್ಕದ ಊರಿನ ನಿವಾಸಿಯೇ ಆರೋಪಿಯಾಗಿದ್ದು ಹನಗೋಡು ಹೋಬಳಿಯ ದಾಸನಪುರ ನಿವಾಸಿ ಜವರಯ್ಯ ಬಂಧಿತ. ಈತನ ಜೊತೆ ಐದಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜವರಯ್ಯ ಹಣದಾಸೆಗಾಗಿ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಪೊಲೀಸರ ಭಯದಿಂದ ಕೊಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kidnap for ransom 9 year boy murdered in Mysuru. Kidnappers who had demanded a ransom of Rs 4 lakh from his father. Later his body was found near Kunterikere in Hunsur on Thursday. He was found murdered and the body was thrown inside a bush.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm