ಬ್ರೇಕಿಂಗ್ ನ್ಯೂಸ್
04-11-21 07:36 pm Headline Karnataka News Desk ಕ್ರೈಂ
ಮೈಸೂರು, ನ.4: ಇಡೀ ದೇಶ ದೀಪಾವಳಿ ಸಂಭ್ರಮದಲ್ಲಿದ್ದರೆ, ಆ ಮಗು ಕೂಡ ಹಬ್ಬಕ್ಕೆ ಪಟಾಕಿ ತರೋದಿಕ್ಕೆ ಹೋಗಿತ್ತು. ಆದರೆ ಪಟಾಕಿ ತರಲು ಹೊರಟಿದ್ದ ಮಗು ಮನೆಗೆ ಬಂದಿರಲಿಲ್ಲ. ಪಟಾಕಿಗೆಂದು ತೆರಳಿದ್ದ ಬಾಲಕನನ್ನು ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳು ಸಿನಿಮಾ ರೀತಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟು ಕೊನೆಗೆ ಕೊಂದು ಬಿಸಾಡಿದ್ದಾರೆ.
ದೀಪಾವಳಿ ಗುಂಗಿನಲ್ಲಿದ್ದ ಹುಣಸೂರು ತಾಲೂಕಿನ ಹನಗೋಡಿನಲ್ಲಿ ದುರಂತವೇ ನಡೆದುಹೋಗಿದೆ. ಹನಗೋಡು ನಿವಾಸಿ, ತರಕಾರಿ ಉದ್ಯಮಿ ನಾಗರಾಜ್ ಅವರ ಹತ್ತು ವರ್ಷದ ಪುತ್ರ ಕಾರ್ತಿಕ್ ದುಷ್ಕರ್ಮಿಗಳ ಕೈಗೆ ಸಿಕ್ಕಿ ದುರಂತ ಸಾವು ಕಂಡಿದ್ದಾನೆ. ನಿನ್ನೆ ರಾತ್ರಿ 7.30ರ ಸುಮಾರಿಗೆ ಪೋಷಕರಿಂದ 10-15 ರೂ. ಪಡೆದುಕೊಂಡು ಪಟಾಕಿ ತರಲು ಹೊರಟಿದ್ದ. ಈ ವೇಳೆ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.



ರಾತ್ರಿಯೇ ಕಾರ್ತಿಕ್ ತಂದೆ ನಾಗರಾಜ್ಗೆ ಕರೆ ಮಾಡಿದ್ದ ಕಿಡ್ನಾಪರ್ಗಳು, ನಿನ್ನ ಮಗ ನಮ್ಮೊಟ್ಟಿಗೆ ಇದ್ದಾನೆ. ಮಗ ಜೀವಂತವಾಗಿ ಬೇಕಿದ್ದರೆ 4 ಲಕ್ಷ ರೂ. ತೆಗೆದುಕೊಂಡು ಹುಣಸೂರಿಗೆ ಬಾ ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಮತ್ತೆ ಕರೆ ಮಾಡಿದಾಗ ಕಿಡ್ನಾಪರ್ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಬಾಲಕನ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಎಎಸ್ಪಿ ಶಿವಕುಮಾರ್ ಮತ್ತು ತಂಡ ರಾತ್ರಿಯೇ ಹುಣಸೂರಿಗೆ ತೆರಳಿ ತಲಾಷ್ ಶುರು ಮಾಡಿತ್ತು. ಮೂರು ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಆದರೆ, ಇಂದು ಮಧ್ಯಾಹ್ನದ ಹೊತ್ತಿಗೆ ಆರೋಪಿ ಸಿಕ್ಕಿದ್ದು ಮಗು ಜೀವಂತ ಇರಲಿಲ್ಲ.
ಪಕ್ಕದ ಊರಿನ ನಿವಾಸಿಯೇ ಆರೋಪಿಯಾಗಿದ್ದು ಹನಗೋಡು ಹೋಬಳಿಯ ದಾಸನಪುರ ನಿವಾಸಿ ಜವರಯ್ಯ ಬಂಧಿತ. ಈತನ ಜೊತೆ ಐದಕ್ಕೂ ಹೆಚ್ಚು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜವರಯ್ಯ ಹಣದಾಸೆಗಾಗಿ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಪೊಲೀಸರ ಭಯದಿಂದ ಕೊಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kidnap for ransom 9 year boy murdered in Mysuru. Kidnappers who had demanded a ransom of Rs 4 lakh from his father. Later his body was found near Kunterikere in Hunsur on Thursday. He was found murdered and the body was thrown inside a bush.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am