ಬ್ರೇಕಿಂಗ್ ನ್ಯೂಸ್
06-11-21 12:46 pm HK Desk ಕ್ರೈಂ
ಪುಣೆ, ನ.6: ಅಪರಾಧ ಪ್ರಕರಣಗಳಲ್ಲಿ ಸಣ್ಣ ಕೂದಲು, ರಕ್ತದ ಕಲೆ ಸಿಕ್ಕರೂ, ಅದು ಹಂತಕನ ಸುಳಿವು ನೀಡುತ್ತದೆ ಎನ್ನುತ್ತಾರೆ. ಅದಕ್ಕಾಗಿ ಯಾವುದೇ ಪ್ರಕರಣ ದಾಖಲಾದ ಕೂಡಲೇ ಪೊಲೀಸರು ಮೊದಲಿಗೆ ಏನಾದ್ರೂ ಕುರುಹು ಸಿಗುತ್ತಾ ಎಂದು ಹುಡುಕಾಟ ನಡೆಸುತ್ತಾರೆ. ಇಲ್ಲೊಂದು ಪ್ರಕರಣದಲ್ಲಿ ಬೇರಾವುದೇ ಸಾಕ್ಷ್ಯ ಇಲ್ಲದಿದ್ದರೂ, ಕೊಲೆಯಾದ ಯುವಕನ ಒಂದು ಚಪ್ಪಲಿಯೇ ಹಂತಕರ ಬಗ್ಗೆ ಸುಳಿವು ನೀಡಿತ್ತು.
ಅಕ್ಟೋಬರ್ 22ರಂದು 27 ವರ್ಷದ ಯುವಕ ನಾಪತ್ತೆಯಾದ ಬಗ್ಗೆ ಚಿಂಚ್ವಾಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವಕನ ತಾಯಿಯೇ ಕೊಲೆ ಬಗ್ಗೆ ಶಂಕಿಸಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಯುವಕನ ಮೊಬೈಲ್ ಕರೆ ಆಧರಿಸಿ ಕೆಲವು ಸುಳಿವುಗಳು ಲಭಿಸಿದ್ದವು. ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆದರೆ, ಮಹಿಳೆಯ ಮನೆ ಬಳಿಗೆ ಹೋದವರಿಗೆ ಕೊಲೆಯಾದ ಯುವಕನ ಚಪ್ಪಲಿ ಸಿಕ್ಕಿತ್ತು.
ಪೊಲೀಸರು ಚಪ್ಪಲಿ ಆಧರಿಸಿ ತನಿಖೆ ಆರಂಭಿಸಿದ್ದರು. ಅದರಂತೆ, ಅ.21ರಂದು ಮಹಿಳೆಗೆ ಯುವಕ ಕರೆ ಮಾಡಿದ್ದು ಕಂಡುಬಂದಿದೆ. ಮಹಿಳೆಯನ್ನು ವಿಚಾರಿಸಿದಾಗ, ಅದೇ ದಿನ ರಾತ್ರಿ ಯುವಕ ಮಹಿಳೆಯ ಮನೆ ಬಳಿಗೆ ಬಂದಿದ್ದ ಅನ್ನೋದು ತಿಳಿದುಬಂದಿದೆ. ಅಷ್ಟೇ ಅಲ್ಲ, ತನ್ನ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ಯುವಕನನ್ನು ಆಕೆಯ ಪತಿ ತನ್ನಿಬ್ಬರು ಗೆಳೆಯರ ಜೊತೆ ಸೇರಿ ಚೂರಿಯಿಂದ ಇರಿದು ಕೊಲೆ ಮಾಡಿದ್ದರು.
ಆನಂತರ, ಮಹಿಳೆಯ ಪತಿಗೆ ಸೇರಿದ ಕಳ್ಳಭಟ್ಟಿ ತಯಾರಿಕಾ ಕೇಂದ್ರಕ್ಕೆ ಶವ ಒಯ್ದು ಅಲ್ಲಿ ದೇಹವನ್ನು ತುಂಡು ಮಾಡಿ ಸುಟ್ಟು ಹಾಕಿದ್ದಾರೆ. ಸುಟ್ಟು ಹೋದ ದೇಹದ ಭಾಗಗಳನ್ನು ವಿವಿಧ ಕಡೆ ಎಸೆದು ತಮ್ಮ ಪಾಡಿಗೆ ಕೆಲಸದಲ್ಲಿ ತೊಡಗಿದ್ದರು. ಆದರೆ, ಇತ್ತ ಪೊಲೀಸ್ ದೂರು ದಾಖಲಾಗಿದ್ದು ಗೊತ್ತಾಗುತ್ತಲೇ ಆರೋಪಿಗಳು ತಲೆಮರೆಸಿಕೊಂಡಿದ್ದರು. ಹಂತಕರು ಯಾರೆಂದು ಗೊತ್ತಾಗುತ್ತಲೇ ಬೆನ್ನುಬಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರನ್ನು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಪುಣೆಯಲ್ಲಿ ಬಂಧಿಸಿದ್ದಾರೆ.
A 27-year-old man, who had gone missing in mid-October, was allegedly murdered by the husband of the woman he was having an affair with, said Pune police. Three people, including the main accused, were arrested in connection with the matter.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am