ಬ್ರೇಕಿಂಗ್ ನ್ಯೂಸ್
06-11-21 12:46 pm HK Desk ಕ್ರೈಂ
ಪುಣೆ, ನ.6: ಅಪರಾಧ ಪ್ರಕರಣಗಳಲ್ಲಿ ಸಣ್ಣ ಕೂದಲು, ರಕ್ತದ ಕಲೆ ಸಿಕ್ಕರೂ, ಅದು ಹಂತಕನ ಸುಳಿವು ನೀಡುತ್ತದೆ ಎನ್ನುತ್ತಾರೆ. ಅದಕ್ಕಾಗಿ ಯಾವುದೇ ಪ್ರಕರಣ ದಾಖಲಾದ ಕೂಡಲೇ ಪೊಲೀಸರು ಮೊದಲಿಗೆ ಏನಾದ್ರೂ ಕುರುಹು ಸಿಗುತ್ತಾ ಎಂದು ಹುಡುಕಾಟ ನಡೆಸುತ್ತಾರೆ. ಇಲ್ಲೊಂದು ಪ್ರಕರಣದಲ್ಲಿ ಬೇರಾವುದೇ ಸಾಕ್ಷ್ಯ ಇಲ್ಲದಿದ್ದರೂ, ಕೊಲೆಯಾದ ಯುವಕನ ಒಂದು ಚಪ್ಪಲಿಯೇ ಹಂತಕರ ಬಗ್ಗೆ ಸುಳಿವು ನೀಡಿತ್ತು.
ಅಕ್ಟೋಬರ್ 22ರಂದು 27 ವರ್ಷದ ಯುವಕ ನಾಪತ್ತೆಯಾದ ಬಗ್ಗೆ ಚಿಂಚ್ವಾಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವಕನ ತಾಯಿಯೇ ಕೊಲೆ ಬಗ್ಗೆ ಶಂಕಿಸಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಯುವಕನ ಮೊಬೈಲ್ ಕರೆ ಆಧರಿಸಿ ಕೆಲವು ಸುಳಿವುಗಳು ಲಭಿಸಿದ್ದವು. ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆದರೆ, ಮಹಿಳೆಯ ಮನೆ ಬಳಿಗೆ ಹೋದವರಿಗೆ ಕೊಲೆಯಾದ ಯುವಕನ ಚಪ್ಪಲಿ ಸಿಕ್ಕಿತ್ತು.
ಪೊಲೀಸರು ಚಪ್ಪಲಿ ಆಧರಿಸಿ ತನಿಖೆ ಆರಂಭಿಸಿದ್ದರು. ಅದರಂತೆ, ಅ.21ರಂದು ಮಹಿಳೆಗೆ ಯುವಕ ಕರೆ ಮಾಡಿದ್ದು ಕಂಡುಬಂದಿದೆ. ಮಹಿಳೆಯನ್ನು ವಿಚಾರಿಸಿದಾಗ, ಅದೇ ದಿನ ರಾತ್ರಿ ಯುವಕ ಮಹಿಳೆಯ ಮನೆ ಬಳಿಗೆ ಬಂದಿದ್ದ ಅನ್ನೋದು ತಿಳಿದುಬಂದಿದೆ. ಅಷ್ಟೇ ಅಲ್ಲ, ತನ್ನ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ಯುವಕನನ್ನು ಆಕೆಯ ಪತಿ ತನ್ನಿಬ್ಬರು ಗೆಳೆಯರ ಜೊತೆ ಸೇರಿ ಚೂರಿಯಿಂದ ಇರಿದು ಕೊಲೆ ಮಾಡಿದ್ದರು.
ಆನಂತರ, ಮಹಿಳೆಯ ಪತಿಗೆ ಸೇರಿದ ಕಳ್ಳಭಟ್ಟಿ ತಯಾರಿಕಾ ಕೇಂದ್ರಕ್ಕೆ ಶವ ಒಯ್ದು ಅಲ್ಲಿ ದೇಹವನ್ನು ತುಂಡು ಮಾಡಿ ಸುಟ್ಟು ಹಾಕಿದ್ದಾರೆ. ಸುಟ್ಟು ಹೋದ ದೇಹದ ಭಾಗಗಳನ್ನು ವಿವಿಧ ಕಡೆ ಎಸೆದು ತಮ್ಮ ಪಾಡಿಗೆ ಕೆಲಸದಲ್ಲಿ ತೊಡಗಿದ್ದರು. ಆದರೆ, ಇತ್ತ ಪೊಲೀಸ್ ದೂರು ದಾಖಲಾಗಿದ್ದು ಗೊತ್ತಾಗುತ್ತಲೇ ಆರೋಪಿಗಳು ತಲೆಮರೆಸಿಕೊಂಡಿದ್ದರು. ಹಂತಕರು ಯಾರೆಂದು ಗೊತ್ತಾಗುತ್ತಲೇ ಬೆನ್ನುಬಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರನ್ನು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಯನ್ನು ಪುಣೆಯಲ್ಲಿ ಬಂಧಿಸಿದ್ದಾರೆ.
A 27-year-old man, who had gone missing in mid-October, was allegedly murdered by the husband of the woman he was having an affair with, said Pune police. Three people, including the main accused, were arrested in connection with the matter.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm