ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm