ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm