ಬ್ರೇಕಿಂಗ್ ನ್ಯೂಸ್
09-11-21 08:53 pm Mangaluru Correspondent ಕ್ರೈಂ
ಮಂಗಳೂರು, ನ.9: ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಸಿಟ್ಟಿನಲ್ಲಿ ಆಕೆಯ ಚಿಕ್ಕಮ್ಮನಿಗೆ ತನ್ನದೇ ಅಶ್ಲೀಲ ವಿಡಿಯೋ ಕಳುಹಿಸಿ, ಅಶ್ಲೀಲವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ನಿವಾಸಿ ಸಂತೋಷ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹುಡುಗಿಯ ಚಿಕ್ಕಮ್ಮ ಪೊಲೀಸ್ ದೂರು ನೀಡಿದ್ದಾರೆ. ಮಹಿಳೆಯ ಅಕ್ಕನ ಮಗಳನ್ನು ಮೂಡಿಗೆರೆ ಮೂಲದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಸಂತೋಷ್ ಎಂಬಾತ ಪ್ರೀತಿಸುತ್ತಿದ್ದ. ಈ ವಿಚಾರ ಹುಡುಗಿಯ ಮನೆಯವರಿಗೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದರು.
ಬಳಿಕ ಆಕೆಯನ್ನು ಮಂಗಳೂರಿನಲ್ಲಿರುವ ಚಿಕ್ಕಮ್ಮ ತನ್ನ ಮನೆಗೆ ಕರೆದುಕೊಂಡು ಬಂದು ಇರಿಸಿದ್ದರು. ಆದರೆ, ಅಲ್ಲಿಯೂ ಹುಡುಗಿಯ ನಂಬರ್ ಪಡೆದು ವಾಟ್ಸಪ್ ಸಂದೇಶ ಕಳುಹಿಸುವುದು ಮತ್ತು ಕರೆ ಮಾಡಿ ಮಾತನಾಡುವುದನ್ನು ಮುಂದುವರಿಸಿದ್ದ. ಇದನ್ನು ತಿಳಿದ ಚಿಕ್ಕಮ್ಮ, ಹುಡುಗಿಯ ಮೊಬೈಲಿನ ಸಿಮ್ ಕಾರ್ಡನ್ನು ತೆಗೆದಿಟ್ಟಿದ್ದರು. ಆನಂತರ ಆರೋಪಿ ಸಂತೋಷ್, ಹುಡುಗಿಯ ಚಿಕ್ಕಮ್ಮನ ಮೊಬೈಲ್ ನಂಬರ್ ಪಡೆದು ಬೇರೆ ಬೇರೆ ನಂಬರ್ ಗಳಿಂದ ಕರೆ ಮಾಡತೊಡಗಿದ್ದ. ಇದರಿಂದ ಬೇಸತ್ತ ಮಹಿಳೆ ಸಂತೋಷ್ ಕರೆ ಮಾಡುತ್ತಿದ್ದ ಎಲ್ಲ ನಂಬರ್ ಗಳನ್ನು ಬ್ಲಾಕ್ ಮಾಡಿದ್ದರು.
ಈ ನಡುವೆ, ಸಂತೋಷ್ ಬೇರೊಂದು ನಂಬರಿನಿಂದ ಚಿಕ್ಕಮ್ಮನ ಮೊಬೈಲಿಗೆ ಗಂಡಸಿನ ಗುಪ್ತಾಂಗದ ನಗ್ನ ಚಿತ್ರವನ್ನು ಕಳುಹಿಸಿದ್ದಾನೆ. ಅಲ್ಲದೆ, ತನ್ನದೇ ಅಶ್ಲೀಲ ವಿಡಿಯೋ ಒಂದನ್ನು ಕಳುಹಿಸಿದ್ದಲ್ಲದೆ, ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಮಾನಸಿಕ ಹಿಂಸೆಗೊಳಗಾದ ಮಹಿಳೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Man arrested for Sending his Nude video and obscene text messages to Women in Mangalore. The arrested has been identified as Santosh from Mudigere.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm