ಬ್ರೇಕಿಂಗ್ ನ್ಯೂಸ್
09-11-21 11:08 pm Mangaluru Correspondent ಕ್ರೈಂ
ಉಳ್ಳಾಲ, ನ.9: ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು ನಿನ್ನೆ ರಾತ್ರಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಝುಪಿಟರ್ ಸ್ಕೂಟರನ್ನ ಯಾರೋ ಕಳವುಗೈದ ಪ್ರಕರಣ ತೊಕ್ಕೊಟ್ಟಿನಲ್ಲಿ ನಡೆದಿದೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿಯ ಪ್ರಿಯಾ ಫ್ಯಾನ್ಸಿ ಅಂಗಡಿ ಹೊಂದಿರುವ ಚೇತನ್ ಅವರ ಮನೆಯಂಗಳದಿಂದ ಸ್ಕೂಟರನ್ನ ಕಳವುಗೈಯಲಾಗಿದೆ. KA 19 ER 0584 ನೋಂದಣಿ ಸಂಖ್ಯೆಯ ಬೂದು (ಗ್ರೇ) ಬಣ್ಣದ ಝುಫಿಟರ್ ಸ್ಕೂಟರನ್ನ ಕಳ್ಳರು ರಾತ್ರೋ ರಾತ್ರಿ ಎಗರಿಸಿದ್ದಾರೆ. ಚೇತನ್ ಅವರ ಮನೆ ಮತ್ತು ವಾಣಿಜ್ಯ ಸಂಕೀರ್ಣ ರಸ್ತೆ ಬದಿಯಲ್ಲೇ ಇದ್ದು, ಅವರದ್ದೇ ವಾಣಿಜ್ಯ ಕಟ್ಟಡದಲ್ಲಿ ಫ್ಯಾನ್ಸಿ ಹೊಂದಿದ್ದಾರೆ. ಚೇತನ್ ನಿನ್ನೆ ರಾತ್ರಿ ಫ್ಯಾನ್ಸಿ ಅಂಗಡಿಯನ್ನು ಬಂದ್ ಮಾಡಿ ಮನೆಯಂಗಳದಲ್ಲಿ ಸ್ಕೂಟರನ್ನ ನಿಲ್ಲಿಸಿದ್ದು ಬೆಳಗ್ಗೆ ಸ್ಕೂಟರ್ ಕಳವಾದ ಬಗ್ಗೆ ತಿಳಿದಿದೆ.
ಮನೆಯ ಮೇಲ್ಬಾಗದಲ್ಲಿರುವ ಸಹಕಾರಿ ಬ್ಯಾಂಕ್ ಶಾಖೆಯ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದು ಕಳ್ಳರ ಬಗ್ಗೆ ಸುಳಿವು ಲಭಿಸಿಲ್ಲ. ಕಳೆದ ಅಕ್ಟೋಬರ್ 28 ರ ರಾತ್ರಿ ಓವರ್ ಬ್ರಿಡ್ಜ್ ನಲ್ಲಿರುವ ಮಾರುತಿ ಸೆಂಟರ್ ವಾಣಿಜ್ಯ ಕಟ್ಟಡದ ಮುಂಭಾಗದಲ್ಲೂ ಬೈಕ್ ಕಳವು ಯತ್ನ ನಡೆದಿತ್ತು. ಮಾರುತಿ ಸೆಂಟರ್ ನ ಮುತ್ತೂಟ್ ಫೈನಾನ್ಸ್ ಸೆಕ್ಯುರಿಟಿ ಗಾರ್ಡ್ ನ ಬೈಕನ್ನೇ ಕಳವಿಗೆ ಯತ್ನಿಸಿದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಅಂಗಡಿಪದವು ಶಾಂತಿನಗರ ನಿವಾಸಿ ನೌಫಾಲ್(23) ಎಂಬಾತನಿಗೆ ಸೆಕ್ಯುರಿಟಿ ಗಾರ್ಡ್ ಸೇರಿ ಸಾರ್ವಜನಿಕರು ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದರು.

ಕಳವಾದ ಸ್ಕೂಟರ್ ಉಳ್ಳಾಲದಲ್ಲಿ ಪತ್ತೆ
ಈ ನಡುವೆ, ನಿನ್ನೆ ರಾತ್ರಿ ಕಳವಾಗಿದ್ದ ಸ್ಕೂಟರ್ ಉಳ್ಳಾಲ ಬೈಲಿನ ಯಮಹಾ ಶೋರೂಂ ಬಳಿ ಮಂಗಳವಾರ ಸಂಜೆ ಪತ್ತೆಯಾಗಿದೆ. ಯಾರೋ ಕಳ್ಳರು ಸ್ಕೂಟರನ್ನು ಕದ್ದೊಯ್ಯಲು ವಿಫಲ ಯತ್ನ ನಡೆಸಿದ್ದಾರೆ. ಆದರೆ, ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿಂದ ಸ್ಕೂಟರನ್ನು ದೂಡುತ್ತಾ ಹೋಗಿ ಉಳ್ಳಾಲದಲ್ಲಿ ಇರಿಸಿ ಹೋಗಿದ್ದು ಸಂಶಯಕ್ಕೆ ಕಾರಣವಾಗಿದೆ.
Mangalore Parked Bike Stolen by theives outside the house, found in Ulall
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm