ಬ್ರೇಕಿಂಗ್ ನ್ಯೂಸ್
11-11-21 03:29 pm Mangaluru Correspondent ಕ್ರೈಂ
ಮಂಗಳೂರು, ನ.11: ಸರೆಂಡರ್ ಮಾಡಿದ್ದ ಕ್ರೆಡಿಟ್ ಕಾರ್ಡನ್ನು ಹ್ಯಾಕ್ ಮಾಡಿ, ಅದರಿಂದ ದುಡ್ಡು ಪೀಕಿಸಿದ್ದ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನೆಲೆಸಿರುವ ಇಬ್ಬರು ಟಿಬೆಟಿಯನ್ ಬುದ್ಧ ಭಿಕ್ಕುಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ನಿವಾಸಿ ಸಿ.ಡಿ. ಅಲೆಗ್ಸಾಂಡರ್ ಎಂಬವರು ಕಳೆದ ಸೆ.9 ರಂದು ತನ್ನ ಎಸ್ ಬಿಐ ಕ್ರೆಡಿಟ್ ಕಾರ್ಡನ್ನು ಬ್ಯಾಂಕಿಗೆ ಸರೆಂಡರ್ ಮಾಡಿದ್ದರೂ ಅದರಿಂದ 1.12 ಲಕ್ಷ ರೂ. ಡ್ರಾ ಆಗಿದ್ದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದರು. 2021ರ ಮಾರ್ಚ್ 23 ರಂದು ಎಸ್ ಬಿಐ ಬ್ಯಾಂಕ್ ಶಾಖೆಗೆ ತೆರಳಿ ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಹೆಚ್ಚಾಗಿದ್ದರಿಂದ ಅದನ್ನು ಮರಳಿ ಬ್ಯಾಂಕಿಗೆ ಕೊಟ್ಟಿದ್ದರು. ಆದರೆ ಮಾರ್ಚ್ 27 ರಂದು ಕ್ರೆಡಿಟ್ ಕಾರ್ಡ್ ಮೂಲಕ 1.12 ಲಕ್ಷ ರೂ. ಡ್ರಾ ಆಗಿತ್ತು. ಬ್ಯಾಂಕ್ ಸಿಬಂದಿ ಬಳಿ ಕೇಳಿದಾಗ, ಕ್ರೆಡಿಟ್ ಕಾರ್ಡ್ ಮೂಲಕ ಡ್ರಾ ಆಗಿದ್ದ ಬಗ್ಗೆ ಮಾಹಿತಿ ನೀಡಿದ್ದರು.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ, ಮೊಬಿವಿಕ್ ವ್ಯಾಲೆಟ್ ಏಪ್ ಮೂಲಕ ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಫಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿರುವುದು ಕಂಡುಬಂದಿತ್ತು. ಅಲ್ಲದೆ, ಈ ಹಣವು ಉತ್ತರ ಕನ್ನಡ ಜಿಲ್ಲೆಯ ತಟ್ಟಿಹಳ್ಳಿಯ ಕೆನರಾ ಡಿಸಿಸಿ ಬ್ಯಾಂಕ್ ಶಾಖೆಯ ಮುಂಡಗೋಡ ನಿವಾಸಿ ಲೋಬ್ ಸ್ಯಾಂಗ್ ಸ್ಯಾಂಗಿಸ್ ಖಾತೆಗೆ ವರ್ಗಾವಣೆ ಆಗಿರುವುದು ತಿಳಿದುಬಂದಿತ್ತು.

ಪ್ರಕರಣ ಸಂಬಂಧಿಸಿ ಮುಂಡಗೋಡದ ಟಿಬೆಟಿಯನ್ ಕಾಲನಿ ನಿವಾಸಿಗಳಾದ ಲೋಬ್ ಸ್ಯಾಂಗ್ ಸ್ಯಾಂಗಿಸ್ (24) ಮತ್ತು ದಕಪಾ ಪುಂಡೇ (40) ಎಂಬವರನ್ನು ಮಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ. ದಕಪಾ ಪುಂಡೆ ಮುಂಡಗೋಡದಲ್ಲಿದ್ದುಕೊಂಡೇ ಚೀನಾದ ನಿಷೇಧಿತ ಚೀನಾ ಏಪ್ ಗಳಾದ ವೀ ಚ್ಯಾಟ್ ಮತ್ತು ರೆಡ್ ಪ್ಯಾಕ್ ಇತ್ಯಾದಿ ಮೂಲಕ ಹವಾಲಾ ಜಾಲದಲ್ಲಿ ಹಣವನ್ನು ತರಿಸಿಕೊಂಡು ಸ್ಥಳೀಯ ಮನಿ ಎಕ್ಸ್ ಚೇಂಜ್ ಏಜಂಟರಲ್ಲಿ ನಗದು ಮಾಡಿಕೊಳ್ಳುತ್ತಿದ್ದರು. ಇಬ್ಬರನ್ನೂ ಟಿಬೇಟ್ ಕಾಲನಿಯಿಂದ ನ.10 ರಂದು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕ್ರೆಡಿಟ್ ಕಾರ್ಡನ್ನು ಬ್ಯಾಂಕಿಗೆ ಸರೆಂಡರ್ ಮಾಡಿದ್ದರೂ, ಅದರ ಮಾಹಿತಿ ಆರೋಪಿಗಳಿಗೆ ರವಾನೆ ಆಗಿದ್ದು ಹೇಗೆ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Cyber Crime Police arrest Two Tibetan from Mundgod arrested for transferring theft money of credit card.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm