ಬ್ರೇಕಿಂಗ್ ನ್ಯೂಸ್
11-11-21 08:54 pm Headline Karnataka News Desk ಕ್ರೈಂ
ಮಂಗಳೂರು, ನ.11: ನಗರದ ಮಣ್ಣಗುಡ್ಡೆಯ ಗಾಂಧಿನಗರದಲ್ಲಿ ಶಾಸಕ ವೇದವ್ಯಾಸ ಕಾಮತ್ ಮನೆ ಬಳಿಯಲ್ಲೇ ಕಳ್ಳರು ಕೈಚಳಕ ಮೆರೆದಿದ್ದಾರೆ. ಗಾಂಧಿನಗರದ ಆರು ಮನೆಗಳಿಗೆ ಕಳ್ಳರು ತೆರಳಿದ್ದು, ಮನೆಮಂದಿ ಮಲಗಿರುವಾಗಲೇ ಎರಡು ಮನೆಗಳ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಚಿನ್ನದ ಒಡವೆಗಳನ್ನು ಕದ್ದೊಯ್ದಿದ್ದಾರೆ.
ಇಬ್ಬರು ಕಳ್ಳರ ಕೈಚಳಕ ಅಲ್ಲಿನ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ರಥಬೀದಿಯ ಸ್ಕೂಲ್ ಬುಕ್ ಕಂಪನಿಯ ಮಾಲೀಕರದ್ದು ಎನ್ನಲಾದ ಮನೆಯ ಒಳಗೆ ನುಗ್ಗಿದ್ದ ಕಳ್ಳರು ಆ ಮನೆಯಲ್ಲಿ ಒಂದೂವರೆ ಲಕ್ಷ ಮೌಲ್ಯದ ಎರಡು ಬಳೆ ಮತ್ತು ಒಂದು ಸರವನ್ನು ಕದ್ದೊಯ್ದಿದ್ದಾರೆ. ಮನೆಯ ಹಿಂಬದಿ ಬಾಗಿಲನ್ನು ಒಡೆದು ಒಳನುಗ್ಗಿದ್ದ ಕಳ್ಳರು ಮನೆಮಂದಿ ಮಲಗಿದ್ದಾಗಲೇ ಕಳ್ಳತನ ನಡೆಸಿದ್ದಾರೆ. ಮನೆ ಆವರಣದಲ್ಲಿ ಹತ್ತು ಅಡಿ ಎತ್ತರ ಗೋಡೆ ಇದ್ದು ಅದನ್ನು ಹಾರಿ ಕಂಪೌಂಡ್ ಒಳಗೆ ಬಂದಿದ್ದರು. ರಾತ್ರಿ ವೇಳೆ ಏನೋ ಶಬ್ದ ಆಗಿದ್ದರಿಂದ ಮನೆಯ ಒಬ್ಬರು ಎದ್ದು ಲೈಟ್ ಹಾಕಿದ್ದರು. ಆನಂತರ ಯಾರೂ ಇಲ್ಲವೆಂದು ಬಾಗಿಲು ಮುಚ್ಚಿ ಮಲಗಿದ್ದರು. ಆದರೆ ಹಿಂಬಾಗಿಲನ್ನು ಒಡೆದು ಕಳವುಗೈದಿದ್ದು ಬೆಳಗ್ಗಿನ ಹೊತ್ತಲ್ಲಿ ಬೆಳಕಿಗೆ ಬಂದಿದೆ. ಕಳ್ಳ ಮನೆ ಕಂಪೌಂಡ್ ಹಾರಿ ನುಗ್ಗಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.




ಅದರ ಬಳಿಯಲ್ಲೇ ಇರುವ ಮೈಸೂರು ಮೂಲದ ಎಸ್.ಕೆ. ರಾಜೇಂದ್ರ ಎಂಬವರ ಮನೆಗೂ ಕಳ್ಳರು ನುಗ್ಗಿದ್ದಾರೆ. ಮನೆಮಂದಿ ಬಾಗಿಲು ಹಾಕಿ ಮೈಸೂರಿಗೆ ತೆರಳಿದ್ದರು. ಆ ಮನೆಯಲ್ಲಿ ಏನೂ ಕಳವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಪರಿಸರದ ಇತರ ನಾಲ್ಕು ಮನೆಗಳಿಗೂ ಕಳ್ಳರು ಹೋಗಿದ್ದರು. ಅಲ್ಲಿ ಮನೆಯ ಒಳಗೆ ನುಗ್ಗಲು ಸಾಧ್ಯವಾಗಿರಲಿಲ್ಲ. ಎರಡು ಮನೆಗೆ ನುಗ್ಗಿದ್ದು, ಒಂದರಲ್ಲಿ ಮಾತ್ರ ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳರು 25ರಿಂದ 30ರ ವಯಸ್ಸಿನವರಾಗಿದ್ದು, ಸದ್ದಿಲ್ಲದೆ ಕಳವು ಮಾಡಿಕೊಂಡು ತೆರಳಿದ್ದಾರೆ. ಕಳ್ಳರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
Mangalore Burglars break into three houses in Gandhinagar in Mangalore near MLAs house, steal lakhs worth of valuables. Barke police have formed a special team to nab the accused.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm