ಬ್ರೇಕಿಂಗ್ ನ್ಯೂಸ್
11-11-21 08:54 pm Headline Karnataka News Desk ಕ್ರೈಂ
ಮಂಗಳೂರು, ನ.11: ನಗರದ ಮಣ್ಣಗುಡ್ಡೆಯ ಗಾಂಧಿನಗರದಲ್ಲಿ ಶಾಸಕ ವೇದವ್ಯಾಸ ಕಾಮತ್ ಮನೆ ಬಳಿಯಲ್ಲೇ ಕಳ್ಳರು ಕೈಚಳಕ ಮೆರೆದಿದ್ದಾರೆ. ಗಾಂಧಿನಗರದ ಆರು ಮನೆಗಳಿಗೆ ಕಳ್ಳರು ತೆರಳಿದ್ದು, ಮನೆಮಂದಿ ಮಲಗಿರುವಾಗಲೇ ಎರಡು ಮನೆಗಳ ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಚಿನ್ನದ ಒಡವೆಗಳನ್ನು ಕದ್ದೊಯ್ದಿದ್ದಾರೆ.
ಇಬ್ಬರು ಕಳ್ಳರ ಕೈಚಳಕ ಅಲ್ಲಿನ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ರಥಬೀದಿಯ ಸ್ಕೂಲ್ ಬುಕ್ ಕಂಪನಿಯ ಮಾಲೀಕರದ್ದು ಎನ್ನಲಾದ ಮನೆಯ ಒಳಗೆ ನುಗ್ಗಿದ್ದ ಕಳ್ಳರು ಆ ಮನೆಯಲ್ಲಿ ಒಂದೂವರೆ ಲಕ್ಷ ಮೌಲ್ಯದ ಎರಡು ಬಳೆ ಮತ್ತು ಒಂದು ಸರವನ್ನು ಕದ್ದೊಯ್ದಿದ್ದಾರೆ. ಮನೆಯ ಹಿಂಬದಿ ಬಾಗಿಲನ್ನು ಒಡೆದು ಒಳನುಗ್ಗಿದ್ದ ಕಳ್ಳರು ಮನೆಮಂದಿ ಮಲಗಿದ್ದಾಗಲೇ ಕಳ್ಳತನ ನಡೆಸಿದ್ದಾರೆ. ಮನೆ ಆವರಣದಲ್ಲಿ ಹತ್ತು ಅಡಿ ಎತ್ತರ ಗೋಡೆ ಇದ್ದು ಅದನ್ನು ಹಾರಿ ಕಂಪೌಂಡ್ ಒಳಗೆ ಬಂದಿದ್ದರು. ರಾತ್ರಿ ವೇಳೆ ಏನೋ ಶಬ್ದ ಆಗಿದ್ದರಿಂದ ಮನೆಯ ಒಬ್ಬರು ಎದ್ದು ಲೈಟ್ ಹಾಕಿದ್ದರು. ಆನಂತರ ಯಾರೂ ಇಲ್ಲವೆಂದು ಬಾಗಿಲು ಮುಚ್ಚಿ ಮಲಗಿದ್ದರು. ಆದರೆ ಹಿಂಬಾಗಿಲನ್ನು ಒಡೆದು ಕಳವುಗೈದಿದ್ದು ಬೆಳಗ್ಗಿನ ಹೊತ್ತಲ್ಲಿ ಬೆಳಕಿಗೆ ಬಂದಿದೆ. ಕಳ್ಳ ಮನೆ ಕಂಪೌಂಡ್ ಹಾರಿ ನುಗ್ಗಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.




ಅದರ ಬಳಿಯಲ್ಲೇ ಇರುವ ಮೈಸೂರು ಮೂಲದ ಎಸ್.ಕೆ. ರಾಜೇಂದ್ರ ಎಂಬವರ ಮನೆಗೂ ಕಳ್ಳರು ನುಗ್ಗಿದ್ದಾರೆ. ಮನೆಮಂದಿ ಬಾಗಿಲು ಹಾಕಿ ಮೈಸೂರಿಗೆ ತೆರಳಿದ್ದರು. ಆ ಮನೆಯಲ್ಲಿ ಏನೂ ಕಳವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಪರಿಸರದ ಇತರ ನಾಲ್ಕು ಮನೆಗಳಿಗೂ ಕಳ್ಳರು ಹೋಗಿದ್ದರು. ಅಲ್ಲಿ ಮನೆಯ ಒಳಗೆ ನುಗ್ಗಲು ಸಾಧ್ಯವಾಗಿರಲಿಲ್ಲ. ಎರಡು ಮನೆಗೆ ನುಗ್ಗಿದ್ದು, ಒಂದರಲ್ಲಿ ಮಾತ್ರ ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳರು 25ರಿಂದ 30ರ ವಯಸ್ಸಿನವರಾಗಿದ್ದು, ಸದ್ದಿಲ್ಲದೆ ಕಳವು ಮಾಡಿಕೊಂಡು ತೆರಳಿದ್ದಾರೆ. ಕಳ್ಳರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
Mangalore Burglars break into three houses in Gandhinagar in Mangalore near MLAs house, steal lakhs worth of valuables. Barke police have formed a special team to nab the accused.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm