ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.



ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am