ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm