ಬ್ರೇಕಿಂಗ್ ನ್ಯೂಸ್
12-09-20 05:11 pm Headline Karnataka News Network ಕ್ರೈಂ
ಮುಂಬೈ, ಸೆ.12: ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ವ್ಯಂಗ್ಯಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪದಲ್ಲಿ ಆಡಳಿತಾರೂಢ ಶಿವಸೇನೆ ಕಾರ್ಯಕರ್ತರು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿದ ಅಮಾನವೀಯ ಕೃತ್ಯದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಗೊಂಡ ಮುಖ ಮತ್ತು ರಕ್ತಸಿಕ್ತ ಕಣ್ಣಿನ ಚಿತ್ರಗಳನ್ನು ಮದನ್ ಶರ್ಮಾ ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. 65 ವರ್ಷ ವಯಸ್ಸಿನ ಶರ್ಮಾ ಅವರ ಮೇಲೆ ಮುಂಬೈನ ಕೊಂಡಿವಲ್ಲಿ ಪೂರ್ವ ಪ್ರದೇಶದಲ್ಲಿರುವ ಅವರ ನಿವಾಸದ ಸಮೀಪ ಹಲ್ಲೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ತಮ್ಮ ನಿವಾಸಿಗಳ ಸಂಘದ ವಾಟ್ಸ್ ಆ್ಯಪ್ ಗ್ರೂಪ್ಗೆ ಒಂದು ಕಾರ್ಟೂನ್ ಫಾರ್ವರ್ಡ್ ಮಾಡಿದ್ದಾಗಿ ಶರ್ಮಾ ದೂರಿನಲ್ಲಿ ವಿವರಿಸಿದ್ದಾರೆ. ಬಳಿಕ ಕಮಲೇಶ್ ಕದಂ ಎಂಬಾತ ಕರೆ ಮಾಡಿ ಹೆಸರು ಮತ್ತು ವಿಳಾಸ ಕೇಳಿದ್ದಾನೆ. ಮಧ್ಯಾಹ್ನ ಮನೆಯಿಂದ ಹೊರಗೆ ಕರೆದು ಗುಂಪು ಹಲ್ಲೆ ನಡೆಸಿದೆ ಎಂದು ಹೇಳಿದ್ದಾರೆ. ಭದ್ರತಾ ವ್ಯವಸ್ಥೆಯ ಸಿಸಿಟಿವಿ ದೃಶ್ಯಾವಳಿಯನ್ನು ವ್ಯಾಪಕವಾಗಿ ಷೇರ್ ಮಾಡಲಾಗಿದ್ದು, ಇದರ ಪ್ರಕಾರ ಮಾಸ್ಕ್ಗಳನ್ನು ಧರಿಸಿದ್ದ ಮಂದಿಯ ಗುಂಪು ಹಲ್ಲೆ ನಡೆಸಿದೆ.
ಶರ್ಮಾ ತಮ್ಮ ಅಪಾರ್ಟ್ಮೆಂಟ್ನ ಮುಖ್ಯದ್ವಾರದಿಂದ ಹೊರ ಬರುತ್ತಿರುವುದು ಹಾಗೂ ಸ್ವಲ್ಪ ಹೊತ್ತಿನಲ್ಲಿ ಗೇಟಿನ ಒಳಗೆ ಓಡಿ ಬರುತ್ತಿರುವ ಅವರನ್ನು ಗುಂಪು ಅಟ್ಟಿಸಿಕೊಂಡು ಬರುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಅವರ ಅಂಗಿ ಹಿಡಿದು ಎಳೆದು ಗುದ್ದುತ್ತಿರುವುದು ಕೂಡಾ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಗಾಯಾಳು ಮದನ್ ಶರ್ಮಾ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
Join our WhatsApp group for latest news updates
video:
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm