ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm