ಬ್ರೇಕಿಂಗ್ ನ್ಯೂಸ್
16-11-21 10:31 pm Bengaluru Correspondent ಕ್ರೈಂ
ಬೆಂಗಳೂರು, ನ.16: ಬಿಜೆಪಿ ನಾಯಕರ ನಿಕಟವರ್ತಿ, ಆರೆಸ್ಸೆಸ್ ನಾಯಕ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಯುವರಾಜ ಸ್ವಾಮಿಗೆ ಸರ್ಕಾರದ ವಿವಿಧ ಹುದ್ದೆಗಳನ್ನು ಪಡೆಯುವುದಕ್ಕಾಗಿ ಲಂಚ ನೀಡಿದ್ದ ಆರೋಪದಲ್ಲಿ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಅಧ್ಯಕ್ಷ ಹುದ್ದೆ ಪಡೆಯಲು ರೂ. 1 ಕೋಟಿ ಲಂಚ ನೀಡಿದ್ದ ಆರೋಪದ ಮೇಲೆ ಎಚ್.ಎಸ್.ಆರ್. ಬಡಾವಣೆ ನಿವಾಸಿ ಸುಧೀಂದ್ರ ರೆಡ್ಡಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅದೇ ರೀತಿ, ತನ್ನ ಅಳಿಯನಿಗೆ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದಲ್ಲಿ (ಕೆಎಂಎಫ್) ಹುದ್ದೆ ಪಡೆಯುವುದಕ್ಕಾಗಿ ರೂ. 30 ಲಕ್ಷ ನೀಡಿದ್ದ ಕಮಲಾನಗರ ನಿವಾಸಿ ಗೋವಿಂದಯ್ಯ ಮತ್ತು ಮಗನಿಗೆ ಬಿಬಿಎಂಪಿಯಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆ ಪಡೆಯುವುದಕ್ಕಾಗಿ ರೂ. 30 ಲಕ್ಷ ನೀಡಿದ್ದ ಆರೋಪದ ಮೇಲೆ ರಾಜಾಜಿನಗರ ನಿವಾಸಿ ಡಾ.ಜಿ. ನರಸಿಂಹಸ್ವಾಮಿ ಎಂಬವರ ವಿರುದ್ಧ ಎಸಿಬಿ ಪ್ರಕರಣಗಳನ್ನು ದಾಖಲಿಸಿದೆ.
ಯುವರಾಜ ಸ್ವಾಮಿ ಹಣ ಪಡೆದು ವಂಚಿಸಿರುವುದಾಗಿ ಇವರು ಈ ಹಿಂದೆ ಜ್ಞಾನಭಾರತಿ, ಅನ್ನಪೂರ್ಣೇಶ್ವರಿ ನಗರ ಮತ್ತು ಸೈಬರ್ ಅಪರಾಧ ಪೊಲೀಸ್ ಠಾಣೆಗಳಿಗೆ ದೂರು ನೀಡಿದ್ದರು. ಅಲ್ಲಿನ ಪೊಲೀಸರು ತನಿಖೆ ನಡೆಸಿ ಯುವರಾಜ ಸ್ವಾಮಿಯನ್ನು ಬಂಧಿಸಿ ಆತನ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.
ಇದೇ ಪ್ರಕರಣದಲ್ಲಿ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ್ ಆರ್. ಅಯ್ಯರ್ ಅಕ್ಟೋಬರ್ 8ರಂದು ಎಸಿಬಿಗೆ ದೂರು ನೀಡಿದ್ದು ಲಂಚ ನೀಡುವುದೂ ಅಪರಾಧ ಆಗಿರುವುದರಿಂದ ಹಣದ ಮೂಲಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಲಂಚ ನೀಡಿರುವ ವ್ಯಕ್ತಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕೋರಿದ್ದರು. ನವೆಂಬರ್ 8ರಂದು ಎಸಿಬಿ ಅಧಿಕಾರಿಗಳು ಮೂರು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
ಯುವರಾಜ ಸ್ವಾಮಿಗೆ ಲಂಚ ನೀಡಿದ್ದ ಆರೋಪದ ಮೇಲೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಇಂದ್ರಕಲಾ ಮತ್ತು ಬಿಜೆಪಿ ಹಾಗೂ ಆರ್ಎಸ್ಎಸ್ ಮುಖಂಡ ಎಂದು ಗುರುತಿಸಿಕೊಂಡಿರುವ ವಿನಿತ್ ಕುಮಾರ್ ಎಂ.ಸಿ. ಎಂಬವರ ವಿರುದ್ಧವೂ ಎಸಿಬಿಗೆ ದೂರು ನೀಡಲಾಗಿತ್ತು. ಅವರ ವಿರುದ್ಧ ಇನ್ನೂ ಪ್ರಕರಣ ದಾಖಲು ಮಾಡಿಲ್ಲ.
Yuvaraj Swamy case ACB files case against those that bribed for post of KSRTC and KMF
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm