ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm