ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 02:36 pm
Mangalore Correspondent
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm