ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am