ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm