ಬ್ರೇಕಿಂಗ್ ನ್ಯೂಸ್
18-11-21 05:15 pm Mangaluru correspondent ಕ್ರೈಂ
ಮಂಗಳೂರು, ನ.18: ನೀರಿನ ಮೀಟರ್ ರೀಡಿಂಗ್ ಮಾಡುವವರು ಎಂದು ಹೇಳಿ ಮನೆಗೆ ಬಂದಿದ್ದ ಇಬ್ಬರು ಮನೆಯಲ್ಲಿದ್ದ ವೃದ್ಧ ಮಹಿಳೆಯನ್ನು ಯಾಮಾರಿಸಿ, ಕಪಾಟಿನಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ಕದ್ದೊಯ್ದ ಘಟನೆ ಉರ್ವಾದಲ್ಲಿ ನಡೆದಿದೆ.
ಉರ್ವಾ ಸ್ಟೋರ್ ಬಳಿಯ ದಡ್ಡಲ್ ಕಾಡ್ ಎಂಬಲ್ಲಿ ಘಟನೆ ನಡೆದಿದೆ. ಮೀರಾ ಪೈ ಎಂಬವರ ಮನೆಗೆ ನ.16ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಇಬ್ಬರು ಬಂದಿದ್ದು ನಾವು ಮಹಾನಗರ ಪಾಲಿಕೆಯಿಂದ ಬಂದಿದ್ದಾಗಿ ಹೇಳಿದ್ದಾರೆ. ನಿಮ್ಮ ನೀರಿನ ಮೀಟರ್ ರೀಡಿಂಗ್ ಮಾಡಬೇಕು, ನೀರಿನ ಸಂಪ್ ಚೆಕ್ ಮಾಡಬೇಕೆಂದು ಹೇಳಿ ಅಧಿಕಾರಿಗಳ ಸೋಗಿನಲ್ಲಿ ಪರಿಶೀಲನೆ ಮಾಡಿದ್ದಾರೆ.
ಆನಂತರ, ಮಹಿಳೆಯ ಜೊತೆಗೆ ಮನೆಯ ಟೆರೇಸಿಗೆ ತೆರಳಿದ್ದ ಇಬ್ಬರು ಅಲ್ಲಿರುವ ನೀರಿನ ಟಾಂಕಿಯನ್ನು ಪರಿಶೀಲನೆ ನಡೆಸಿದ್ದು, ಮನೆ ಹಿಂಭಾಗದಲ್ಲಿ ಗಲೀಜು ಮಾಡದಂತೆ ಹೇಳಿದ್ದಾರೆ. ಈ ವೇಳೆ, ಪರಿಸರದ ನಿವಾಸಿಗಳು ಕೂಡ ಬಂದಿದ್ದು, ನೀವು ಮಹಾನಗರ ಪಾಲಿಕೆಯವರು ಅನ್ನುವುದಕ್ಕೆ ಯಾವ ದಾಖಲೆಯಿದೆ ಎಂದು ಹೇಳಿ ಕೇಳಿದ್ದಾರೆ. ಅದು ಬೈಕಿನಲ್ಲಿದೆ ಎಂದು ಕೊಡುತ್ತೇವೆಂದು ಹೇಳಿ, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದರು.
ಸಂಜೆ ವೇಳೆಗೆ, ಮನೆಯ ಒಳಗಿನ ಕಪಾಟಿನಲ್ಲಿ ಚೆಕ್ ಮಾಡಿದಾಗ, 68 ಗ್ರಾಮ್ ಚಿನ್ನಾಭರಣ ಮತ್ತು 71 ಸಾವಿರ ರೂ. ನಗದು ಹಣ ಕಳವಾಗಿತ್ತು. ಇದರ ಬಗ್ಗೆ 70 ವರ್ಷದ ಮೀರಾ ಪೈ ಉರ್ವಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮೀಟರ್ ರೀಡಿಂಗ್ ಎಂದು ಹೇಳಿ ಇಬ್ಬರು ಅಜ್ಜಿಯ ಜೊತೆಗೆ ಮಾತನಾಡುತ್ತಿದ್ದರೆ, ಇನ್ನೊಬ್ಬ ವ್ಯಕ್ತಿ ಮನೆಯ ಒಳಗೆ ಹೋಗಿದ್ದ ಅನ್ನುವುದನ್ನು ಪತ್ತೆ ಮಾಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಅದರ ಆಧಾರದಲ್ಲಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
Mangalore Robbery in Urwa store, Burglars enter home loot cash and gold.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm