ಬ್ರೇಕಿಂಗ್ ನ್ಯೂಸ್
20-11-21 10:29 pm Mangaluru Correspondent ಕ್ರೈಂ
ಬಂಟ್ವಾಳ, ನ.20: ರಸ್ತೆಯ ವಿಚಾರದಲ್ಲಿ ಎರಡು ಮನೆಗಳ ಮಧ್ಯೆ ಜಾಗದ ತಕರಾರು ಇದ್ದರೂ, ಮಧ್ಯಪ್ರವೇಶ ಮಾಡಿದ ದಲಿತ ಸಂಘಟನೆಯ ನಾಯಕರು ಮೇಲ್ವರ್ಗದ ಪರವಾಗಿ ವಕಾಲತ್ತು ವಹಿಸಿದ್ದಲ್ಲದೆ ದಲಿತ ಮಹಿಳೆಯನ್ನೇ ಕತ್ತು ಹಿಡಿದು ತಳ್ಳಿ ಹಲ್ಲೆಗೈದ ಘಟನೆ ತಾಲೂಕಿನ ವಾಮದಪದವು ಬಳಿಯ ಬಸ್ತಿಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಸ್ತಿಕೋಡಿ ಪಂಚಾಯತಿಗೆ ಒಳಪಟ್ಟ ಕೊಡಂಬೆಟ್ಟಿನ ಆಲೆಪ್ಪಾಡಿ ಎಂಬಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಶಾಂತ (55) ಎಂಬ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮನೆಯವರಿಗೂ, ನೆರೆಮನೆಯ ನವೀನ್ ಪೂಜಾರಿ ಎಂಬವರ ಮಧ್ಯೆ ಜಾಗದ ತಕರಾರು ಇತ್ತು. ಕಳೆದ ಕೆಲವು ವರ್ಷಗಳಿಂದ ನವೀನ್ ಪೂಜಾರಿ ಮನೆಯವರು ಮಹಿಳೆಯ ಮನೆಯವರಿಗೆ ಸೇರಿದ್ದ ಜಾಗದಲ್ಲಿ ಹೋಗಿ ಬರುತ್ತಿದ್ದರು. ಆದರೆ, ಇತ್ತೀಚೆಗೆ ಸದ್ರಿ ಜಾಗವನ್ನು ಪೋರ್ಜರಿ ದಾಖಲೆ ಸೃಷ್ಟಿಸಿ, ತಮ್ಮ ಹೆಸರಿಗೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಮಹಿಳೆಯ ಮನೆಯವರು ಆಕ್ಷೇಪ ತೆಗೆದಿದ್ದರು. ಅಲ್ಲದೆ, ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಕಡೆ ದೂರನ್ನೂ ನೀಡಿದ್ದರು. ಅಲ್ಲದೆ, ನವೀನ್ ಮನೆಯವರು ಹೋಗಿ ಬರುತ್ತಿದ್ದ ಜಾಗಕ್ಕೆ ಅಡ್ಡಲಾಗಿ ಬೇಲಿ ಹಾಕಿದ್ದರು.






ಇದರಿಂದ ಎರಡೂ ಮನೆಯವರಿಗೆ ಜಟಾಪಟಿ ನಡೆದಿತ್ತು. ನ.18ರಂದು ಮಧ್ಯಾಹ್ನ ನವೀನ್ ಮನೆಯವರು ಏಕಾಏಕಿ ಜೆಸಿಬಿ ತಂದು ಬೇಲಿಯನ್ನು ಕಿತ್ತೆಸೆದು ರಸ್ತೆ ಮಾಡಿದ್ದಾರೆ. ಈ ವೇಳೆ, ಜೆಸಿಬಿ ಕಾಮಗಾರಿ ತಡೆಯಲು ಹೋಗಿದ್ದ ಮಹಿಳೆಯ ಮೇಲೆ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜನಾರ್ದನ ಚೆಂಡ್ತಿಮಾರ್, ಚಂದ್ರಶೇಖರ ಕುಕ್ಕಿಮಾರ್, ಉಮೇಶ್ ಕುಮಾರ್ ಎಂಬವರ ನೇತೃತ್ವದಲ್ಲಿ ದೈಹಿಕ ಹಲ್ಲೆ ನಡೆಸಲಾಗಿದೆ.
ಐದಾರು ಮಂದಿ ಏಕಾಏಕಿ ದಾಳಿ ನಡೆಸಿದ್ದರಿಂದ ಆಘಾತಕ್ಕೆ ಒಳಗಾದ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಳಿಕ ವಾಮದಪದವು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರಿಂದ ಆಕೆಯ ಮಕ್ಕಳು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಹಲ್ಲೆ ಯತ್ನ ಕೇಸು ದಾಖಲಿಸಿ ಆರೋಪಿಗಳ ಪರ ನಿಂತಿದ್ದಾರೆಂದು ದೂರಲಾಗಿದೆ. ಜಾಗದಲ್ಲಿ ಬೆಳೆಸಿದ್ದ ಬಾಳೆ ಇನ್ನಿತರ ಕೃಷಿಯನ್ನು ಕಿತ್ತುಹಾಕಿ, ಅಲ್ಲಿ ರಸ್ತೆ ಮಾಡಲಾಗಿದೆ. ಅಲ್ಲದೆ, ದಲಿತ ಸಂಘಟನೆ ಎಂದು ಹೇಳಿಕೊಂಡು ತಿರುಗಾಡುವ ಮಂದಿಯೇ ಎದುರು ಮನೆಯ ನವೀನ್ ಪೂಜಾರಿ ಜೊತೆ ಸೇರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಹಿಳೆಯ ಪುತ್ರ ನವೀನ್ ಆರೋಪಿಸಿದ್ದಾರೆ.
Bantwa, Vamadapadavu Dalit Woman assaulted by Dalit community members and goons over a property dispute, woman hospitalised.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm