ಬ್ರೇಕಿಂಗ್ ನ್ಯೂಸ್
20-11-21 10:29 pm Mangaluru Correspondent ಕ್ರೈಂ
ಬಂಟ್ವಾಳ, ನ.20: ರಸ್ತೆಯ ವಿಚಾರದಲ್ಲಿ ಎರಡು ಮನೆಗಳ ಮಧ್ಯೆ ಜಾಗದ ತಕರಾರು ಇದ್ದರೂ, ಮಧ್ಯಪ್ರವೇಶ ಮಾಡಿದ ದಲಿತ ಸಂಘಟನೆಯ ನಾಯಕರು ಮೇಲ್ವರ್ಗದ ಪರವಾಗಿ ವಕಾಲತ್ತು ವಹಿಸಿದ್ದಲ್ಲದೆ ದಲಿತ ಮಹಿಳೆಯನ್ನೇ ಕತ್ತು ಹಿಡಿದು ತಳ್ಳಿ ಹಲ್ಲೆಗೈದ ಘಟನೆ ತಾಲೂಕಿನ ವಾಮದಪದವು ಬಳಿಯ ಬಸ್ತಿಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಸ್ತಿಕೋಡಿ ಪಂಚಾಯತಿಗೆ ಒಳಪಟ್ಟ ಕೊಡಂಬೆಟ್ಟಿನ ಆಲೆಪ್ಪಾಡಿ ಎಂಬಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಶಾಂತ (55) ಎಂಬ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮನೆಯವರಿಗೂ, ನೆರೆಮನೆಯ ನವೀನ್ ಪೂಜಾರಿ ಎಂಬವರ ಮಧ್ಯೆ ಜಾಗದ ತಕರಾರು ಇತ್ತು. ಕಳೆದ ಕೆಲವು ವರ್ಷಗಳಿಂದ ನವೀನ್ ಪೂಜಾರಿ ಮನೆಯವರು ಮಹಿಳೆಯ ಮನೆಯವರಿಗೆ ಸೇರಿದ್ದ ಜಾಗದಲ್ಲಿ ಹೋಗಿ ಬರುತ್ತಿದ್ದರು. ಆದರೆ, ಇತ್ತೀಚೆಗೆ ಸದ್ರಿ ಜಾಗವನ್ನು ಪೋರ್ಜರಿ ದಾಖಲೆ ಸೃಷ್ಟಿಸಿ, ತಮ್ಮ ಹೆಸರಿಗೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಮಹಿಳೆಯ ಮನೆಯವರು ಆಕ್ಷೇಪ ತೆಗೆದಿದ್ದರು. ಅಲ್ಲದೆ, ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಕಡೆ ದೂರನ್ನೂ ನೀಡಿದ್ದರು. ಅಲ್ಲದೆ, ನವೀನ್ ಮನೆಯವರು ಹೋಗಿ ಬರುತ್ತಿದ್ದ ಜಾಗಕ್ಕೆ ಅಡ್ಡಲಾಗಿ ಬೇಲಿ ಹಾಕಿದ್ದರು.






ಇದರಿಂದ ಎರಡೂ ಮನೆಯವರಿಗೆ ಜಟಾಪಟಿ ನಡೆದಿತ್ತು. ನ.18ರಂದು ಮಧ್ಯಾಹ್ನ ನವೀನ್ ಮನೆಯವರು ಏಕಾಏಕಿ ಜೆಸಿಬಿ ತಂದು ಬೇಲಿಯನ್ನು ಕಿತ್ತೆಸೆದು ರಸ್ತೆ ಮಾಡಿದ್ದಾರೆ. ಈ ವೇಳೆ, ಜೆಸಿಬಿ ಕಾಮಗಾರಿ ತಡೆಯಲು ಹೋಗಿದ್ದ ಮಹಿಳೆಯ ಮೇಲೆ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜನಾರ್ದನ ಚೆಂಡ್ತಿಮಾರ್, ಚಂದ್ರಶೇಖರ ಕುಕ್ಕಿಮಾರ್, ಉಮೇಶ್ ಕುಮಾರ್ ಎಂಬವರ ನೇತೃತ್ವದಲ್ಲಿ ದೈಹಿಕ ಹಲ್ಲೆ ನಡೆಸಲಾಗಿದೆ.
ಐದಾರು ಮಂದಿ ಏಕಾಏಕಿ ದಾಳಿ ನಡೆಸಿದ್ದರಿಂದ ಆಘಾತಕ್ಕೆ ಒಳಗಾದ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಳಿಕ ವಾಮದಪದವು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರಿಂದ ಆಕೆಯ ಮಕ್ಕಳು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಹಲ್ಲೆ ಯತ್ನ ಕೇಸು ದಾಖಲಿಸಿ ಆರೋಪಿಗಳ ಪರ ನಿಂತಿದ್ದಾರೆಂದು ದೂರಲಾಗಿದೆ. ಜಾಗದಲ್ಲಿ ಬೆಳೆಸಿದ್ದ ಬಾಳೆ ಇನ್ನಿತರ ಕೃಷಿಯನ್ನು ಕಿತ್ತುಹಾಕಿ, ಅಲ್ಲಿ ರಸ್ತೆ ಮಾಡಲಾಗಿದೆ. ಅಲ್ಲದೆ, ದಲಿತ ಸಂಘಟನೆ ಎಂದು ಹೇಳಿಕೊಂಡು ತಿರುಗಾಡುವ ಮಂದಿಯೇ ಎದುರು ಮನೆಯ ನವೀನ್ ಪೂಜಾರಿ ಜೊತೆ ಸೇರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಹಿಳೆಯ ಪುತ್ರ ನವೀನ್ ಆರೋಪಿಸಿದ್ದಾರೆ.
Bantwa, Vamadapadavu Dalit Woman assaulted by Dalit community members and goons over a property dispute, woman hospitalised.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm