ಬ್ರೇಕಿಂಗ್ ನ್ಯೂಸ್
20-11-21 10:29 pm Mangaluru Correspondent ಕ್ರೈಂ
ಬಂಟ್ವಾಳ, ನ.20: ರಸ್ತೆಯ ವಿಚಾರದಲ್ಲಿ ಎರಡು ಮನೆಗಳ ಮಧ್ಯೆ ಜಾಗದ ತಕರಾರು ಇದ್ದರೂ, ಮಧ್ಯಪ್ರವೇಶ ಮಾಡಿದ ದಲಿತ ಸಂಘಟನೆಯ ನಾಯಕರು ಮೇಲ್ವರ್ಗದ ಪರವಾಗಿ ವಕಾಲತ್ತು ವಹಿಸಿದ್ದಲ್ಲದೆ ದಲಿತ ಮಹಿಳೆಯನ್ನೇ ಕತ್ತು ಹಿಡಿದು ತಳ್ಳಿ ಹಲ್ಲೆಗೈದ ಘಟನೆ ತಾಲೂಕಿನ ವಾಮದಪದವು ಬಳಿಯ ಬಸ್ತಿಕೋಡಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಸ್ತಿಕೋಡಿ ಪಂಚಾಯತಿಗೆ ಒಳಪಟ್ಟ ಕೊಡಂಬೆಟ್ಟಿನ ಆಲೆಪ್ಪಾಡಿ ಎಂಬಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಶಾಂತ (55) ಎಂಬ ಮಹಿಳೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮನೆಯವರಿಗೂ, ನೆರೆಮನೆಯ ನವೀನ್ ಪೂಜಾರಿ ಎಂಬವರ ಮಧ್ಯೆ ಜಾಗದ ತಕರಾರು ಇತ್ತು. ಕಳೆದ ಕೆಲವು ವರ್ಷಗಳಿಂದ ನವೀನ್ ಪೂಜಾರಿ ಮನೆಯವರು ಮಹಿಳೆಯ ಮನೆಯವರಿಗೆ ಸೇರಿದ್ದ ಜಾಗದಲ್ಲಿ ಹೋಗಿ ಬರುತ್ತಿದ್ದರು. ಆದರೆ, ಇತ್ತೀಚೆಗೆ ಸದ್ರಿ ಜಾಗವನ್ನು ಪೋರ್ಜರಿ ದಾಖಲೆ ಸೃಷ್ಟಿಸಿ, ತಮ್ಮ ಹೆಸರಿಗೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಮಹಿಳೆಯ ಮನೆಯವರು ಆಕ್ಷೇಪ ತೆಗೆದಿದ್ದರು. ಅಲ್ಲದೆ, ಸ್ಥಳೀಯ ಪಂಚಾಯತ್ ಸೇರಿದಂತೆ ವಿವಿಧ ಕಡೆ ದೂರನ್ನೂ ನೀಡಿದ್ದರು. ಅಲ್ಲದೆ, ನವೀನ್ ಮನೆಯವರು ಹೋಗಿ ಬರುತ್ತಿದ್ದ ಜಾಗಕ್ಕೆ ಅಡ್ಡಲಾಗಿ ಬೇಲಿ ಹಾಕಿದ್ದರು.






ಇದರಿಂದ ಎರಡೂ ಮನೆಯವರಿಗೆ ಜಟಾಪಟಿ ನಡೆದಿತ್ತು. ನ.18ರಂದು ಮಧ್ಯಾಹ್ನ ನವೀನ್ ಮನೆಯವರು ಏಕಾಏಕಿ ಜೆಸಿಬಿ ತಂದು ಬೇಲಿಯನ್ನು ಕಿತ್ತೆಸೆದು ರಸ್ತೆ ಮಾಡಿದ್ದಾರೆ. ಈ ವೇಳೆ, ಜೆಸಿಬಿ ಕಾಮಗಾರಿ ತಡೆಯಲು ಹೋಗಿದ್ದ ಮಹಿಳೆಯ ಮೇಲೆ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಜನಾರ್ದನ ಚೆಂಡ್ತಿಮಾರ್, ಚಂದ್ರಶೇಖರ ಕುಕ್ಕಿಮಾರ್, ಉಮೇಶ್ ಕುಮಾರ್ ಎಂಬವರ ನೇತೃತ್ವದಲ್ಲಿ ದೈಹಿಕ ಹಲ್ಲೆ ನಡೆಸಲಾಗಿದೆ.
ಐದಾರು ಮಂದಿ ಏಕಾಏಕಿ ದಾಳಿ ನಡೆಸಿದ್ದರಿಂದ ಆಘಾತಕ್ಕೆ ಒಳಗಾದ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಳಿಕ ವಾಮದಪದವು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರಿಂದ ಆಕೆಯ ಮಕ್ಕಳು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಹಲ್ಲೆ ಯತ್ನ ಕೇಸು ದಾಖಲಿಸಿ ಆರೋಪಿಗಳ ಪರ ನಿಂತಿದ್ದಾರೆಂದು ದೂರಲಾಗಿದೆ. ಜಾಗದಲ್ಲಿ ಬೆಳೆಸಿದ್ದ ಬಾಳೆ ಇನ್ನಿತರ ಕೃಷಿಯನ್ನು ಕಿತ್ತುಹಾಕಿ, ಅಲ್ಲಿ ರಸ್ತೆ ಮಾಡಲಾಗಿದೆ. ಅಲ್ಲದೆ, ದಲಿತ ಸಂಘಟನೆ ಎಂದು ಹೇಳಿಕೊಂಡು ತಿರುಗಾಡುವ ಮಂದಿಯೇ ಎದುರು ಮನೆಯ ನವೀನ್ ಪೂಜಾರಿ ಜೊತೆ ಸೇರಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಮಹಿಳೆಯ ಪುತ್ರ ನವೀನ್ ಆರೋಪಿಸಿದ್ದಾರೆ.
Bantwa, Vamadapadavu Dalit Woman assaulted by Dalit community members and goons over a property dispute, woman hospitalised.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm