ಬ್ರೇಕಿಂಗ್ ನ್ಯೂಸ್
21-11-21 10:55 pm Mangaluru Correspondent ಕ್ರೈಂ
ಪುತ್ತೂರು, ನ.21: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಉದ್ದೇಶಿಸಿ ಈ ಜಾಗ ನನಗೆ ಸೇರಿದ್ದು, ಇಲ್ಲಿ ನೀವು ಏನಾದರೂ ಬೆಳೆದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿ ಕೈಯಲ್ಲಿದ್ದ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿದ್ದಾನೆ.
ಆದರೆ, ಈ ವೇಳೆ ಮಹಿಳೆ ಬಗ್ಗಿ ತಪ್ಪಿಸಿಕೊಂಡಿದ್ದರಿಂದ ಗುಂಡು ಮೈಗೆ ತಾಗದೇ ತಪ್ಪಿ ಹೋಗಿದೆ. ಈ ಬಗ್ಗೆ ಮಹಿಳೆ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಆರೋಪಿ ದೇವಪ್ಪ ಗೌಡ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾನೆ.
Land Dispute, Woman shot through Gun by a relative in Puttur, serious in hospital.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm