ಬ್ರೇಕಿಂಗ್ ನ್ಯೂಸ್
22-11-21 07:41 pm HK News Desk ಕ್ರೈಂ
ಬೆಂಗಳೂರು, ನ.22 : ‘ಇನ್ಸ್ಟಾಗ್ರಾಮ್' ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಗಿಫ್ಟ್ ಕಳುಹಿಸುತ್ತೇನೆಂದು ಹೇಳಿ ಮಹಿಳೆಯೊಬ್ಬರಿಂದ ಬರೋಬ್ಬರಿ 45 ಲಕ್ಷ ರೂ. ಪೀಕಿಸಿಕೊಂಡು ಪಂಗನಾಮ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಮಹಿಳೆ ವೈಟ್ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ವರ್ತೂರು ನಿವಾಸಿ 30 ವರ್ಷದ ಮಹಿಳೆಗೆ ಅಲೆಕ್ಸ್ ಎರಿನ್ ಎಂಬ ಹೆಸರಿನ ವ್ಯಕ್ತಿ ‘ಇನ್ಸ್ಟಾಗ್ರಾಮ್' ನಲ್ಲಿ ಪರಿಚಯವಾಗಿದ್ದ. ತಾನು ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದಾಗಿ ಹೇಳಿಕೊಂಡು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಇದನ್ನು ನಂಬಿದ್ದ ಮಹಿಳೆ, ಗೆಳೆತನಕ್ಕೆ ಒಪ್ಪಿ ಚಾಟಿಂಗ್ ಆರಂಭಿಸಿದ್ದರು. ಈ ನಡುವೆ ಆರೋಪಿ ತಮ್ಮ ಸ್ನೇಹದ ನೆನಪಿಗಾಗಿ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದ. ಅದಕ್ಕೆ ಮಹಿಳೆ ಸಮ್ಮತಿಸಿದ್ದರು. ಅದರಂತೆ ಸೆ.30ರಂದು ಮಹಿಳೆಗೆ ಕರೆ ಮಾಡಿದ್ದ ಮತ್ತೊಬ್ಬ ವ್ಯಕ್ತಿ, ತಾನು ದಿಲ್ಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮಗೆ ವಿದೇಶದಿಂದ ಬೆಲೆಬಾಳುವ ಡೈಮಂಡ್ ಉಡುಗೊರೆ ಬಂದಿರುವುದಾಗಿ ಹೇಳಿದ್ದ. ಅದನ್ನು ಸ್ವೀಕರಿಸಲು ಕೆಲವು ಶುಲ್ಕಗಳನ್ನು ಪಾವತಿಸಬೇಕು ಎಂದು ಸೂಚಿಸಿದ್ದು ಶುಲ್ಕ ತುಂಬದಿದ್ದರೆ ಜೈಲು ಶಿಕ್ಷೆಯಾಗುವುದಾಗಿ ಮಹಿಳೆಯನ್ನು ಹೆದರಿಸಿದ್ದ.
ಆರೋಪಿಯ ಮಾತು ನಂಬಿದ ಮಹಿಳೆ, ಆತ ಹೇಳಿದ್ದ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ಹಂತ ಹಂತವಾಗಿ 45.31 ಲಕ್ಷ ರೂ. ಪಾವತಿಸಿದ್ದರು. ಆದರೆ ಹಣ ಪಡೆದ ಆರೋಪಿಗಳು ಯಾವುದೇ ಉಡುಗೊರೆ ಕಳುಹಿಸಿಲ್ಲ. ಅಲ್ಲದೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.
ವಂಚನೆಗೊಳಗಾದ ಮಹಿಳೆ ನೀಡಿರುವ ದೂರಿನಂತೆ ಆರೋಪಿಗಳಾದ ಅಲೆಕ್ಸ್ ಎರಿಕ್, ವೀರ್ ಪಾಲ್, ಬೆನ್ ಹಾಗೂ ಮಥುರಾ ಅನಿವರ್ ಎಂಬವರ ವಿರುದ್ಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Bangalore Woman Cheated of 45 lakhs on Instagram
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am