ಬ್ರೇಕಿಂಗ್ ನ್ಯೂಸ್
24-11-21 08:54 pm HK news Desk ಕ್ರೈಂ
ಪುತ್ತೂರು, ನ.24: ಇತ್ತೀಚೆಗೆ ಪುತ್ತೂರಿಗೆ ಜಮೀನು ನೋಡಲು ಹೋಗಿ ನಾಪತ್ತೆಯಾಗಿದ್ದ ಮೈಸೂರು ಮೂಲದ ಫೋಟೋಗ್ರಾಫರನ್ನು ಕೊಲೆಗೈದು ಕಾಡಿನಲ್ಲಿ ಹೂತು ಹಾಕಿರುವ ರಹಸ್ಯವನ್ನು ಪೊಲೀಸರು ಹೊರಗೆಡವಿದ್ದಾರೆ. ಮೈಸೂರಿನಲ್ಲಿ ಫೋಟೋಗ್ರಾಫರ್ ಆಗಿದ್ದ, ಮಂಗಳೂರು ಮೂಲದ ನಿವಾಸಿ ಜಗದೀಶ (52) ಕೊಲೆಯಾದವರು.
ಜಗದೀಶ್ ಮೂಲತಃ ಮಂಗಳೂರು ನಿವಾಸಿಯಾಗಿದ್ದರೂ, ಮೈಸೂರಿನಲ್ಲಿ ಫೋಟೋಗ್ರಫಿ ವೃತ್ತಿ ಸಂಬಂಧ ಹಲವು ವರ್ಷಗಳಿಂದ ಅಲ್ಲಿನ ಸುಬ್ರಹ್ಮಣ್ಯ ನಗರದಲ್ಲಿ ಪತ್ನಿ ಮಕ್ಕಳೊಂದಿಗೆ ನೆಲೆಸಿದ್ದರು. ಈ ನಡುವೆ, ಮೂರು ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರುಪಂಜ ಎಂಬಲ್ಲಿ ಅಡಿಕೆ ತೋಟ ಇದ್ದ ಎರಡು ಎಕರೆ ಜಾಗವನ್ನು ಖರೀದಿಸಿ ಕೃಷಿ ಮಾಡಿಕೊಂಡಿದ್ದರು. ತೋಟವನ್ನು ನೋಡಿಕೊಳ್ಳಲು ಸಂಬಂಧದಲ್ಲಿ ಮಾವನಾಗಿರುವ ಅದೇ ಪರಿಸರದ ನಿವಾಸಿ ಬಾಲಕೃಷ್ಣ ರೈ ಎಂಬವರಿಗೆ ವಹಿಸಿದ್ದರು.
ಕೆಲವೊಮ್ಮೆ ಊರಿಗೆ ಬಂದ ವೇಳೆ, ತೋಟಕ್ಕೆ ಹೋಗಿ ನೋಡಿ ಬರುತ್ತಿದ್ದರು. ವಾರದ ಹಿಂದೆ ಮಂಗಳೂರಿಗೆ ಬಂದಿದ್ದ ವೇಳೆ, ಜಗದೀಶ್ ತನ್ನ ಓಮ್ನಿ ಕಾರಿನಲ್ಲಿ ಪುತ್ತೂರಿಗೆ ತೆರಳಿದ್ದು , ತೋಟಕ್ಕೆ ಹೋಗಿ ಆಬಳಿಕ ಮೈಸೂರಿಗೆ ತೆರಳುವುದಾಗಿ ಪತ್ನಿಯಲ್ಲಿ ಹೇಳಿ ಹೋಗಿದ್ದರು. ಆದರೆ, ತೋಟಕ್ಕೆ ಹೋಗಿದ್ದ ವ್ಯಕ್ತಿ ಕಾಣೆಯಾಗಿದ್ದರು. ಈ ಬಗ್ಗೆ ಬಾಲಕೃಷ್ಣ ರೈ ಬಳಿ ಕೇಳಿದರೆ, ನ.18ರಂದು ತೋಟಕ್ಕೆ ಬಂದಿದ್ದ ಜಗದೀಶ ಓಮ್ನಿ ಕಾರಿನಲ್ಲಿ ಹಿಂತಿರುಗಿ ಹೋಗಿದ್ದಾಗಿ ತಿಳಿಸಿದ್ದರು. ಈ ಬಗ್ಗೆ ಜಗದೀಶ ಅವರ ಅಣ್ಣ ಮಂಗಳೂರಿನ ಕಾವೂರಿನಲ್ಲಿ ನೆಲೆಸಿರುವ ಶಶಿಧರ ಅವರು ತಮ್ಮ ಕಾಣೆಯಾಗಿರುವ ಬಗ್ಗೆ ಪುತ್ತೂರು ಠಾಣೆಯಲ್ಲಿ ಕೇಸು ದಾಖಲಿಸಿದ್ದರು.
ಜಗದೀಶನ ನಾಪತ್ತೆ ಬಗ್ಗೆ ಸಂಶಯ ಹೆಚ್ಚಿದ್ದರಿಂದ ಶಶಿಧರ ಅವರು ಮಾವ ಬಾಲಕೃಷ್ಣ ರೈ ಕುಟುಂಬದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಅದರಂತೆ, ಶಶಿಧರ ಅವರು ಪುನಃ ದೂರೊಂದನ್ನು ನೀಡಿ, ತನ್ನ ತಮ್ಮನನ್ನು ಬಾಲಕೃಷ್ಣ ರೈ ಮತ್ತು ಅವರ ಮಗ ಅಪಹರಿಸಿ ಜೀವಕ್ಕೆ ಹಾನಿ ಮಾಡಿದ್ದಾರೆಂದು ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದ್ದು, ಬಾಲಕೃಷ್ಣ ರೈ ಮತ್ತು ಅವರ ಕುಟುಂಬಸ್ಥರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ, ನಿಜ ವಿಚಾರ ಹೊರಗೆ ಬಂದಿದೆ.
ಜಗದೀಶನನ್ನು ಬಾಲಕೃಷ್ಣ ರೈ, ಪತ್ನಿ ಜಯಲಕ್ಷ್ಮಿ, ಮಗ ಪ್ರಶಾಂತ್, ಮನೆ ಪರಿಸರದ ನಿವಾಸಿ ಜೀವನ್ ಪ್ರಸಾದ್ ಎಂಬವರು ಸೇರಿ ಕೊಲೆ ಮಾಡಿದ್ದು, ಬಳಿಕ ಮನೆ ಬಳಿಯ ಕಾಡಿನಲ್ಲಿ ಗುಂಡಿ ತೆಗೆದು ಹೂತು ಹಾಕಿದ್ದರು. ಈ ಬಗ್ಗೆ ಯಾರಿಗೂ ತಿಳಿಯದಂತೆ, ವಿಷಯವನ್ನು ಮುಚ್ಚಿ ಹಾಕಿದ್ದರು. ಆದರೆ, ದೂರುದಾರರ ಸಂಶಯದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ಬಯಲಾಗಿದೆ. ಜಾಗದ ಮೇಲಿನ ಆಸೆಯಿಂದ ಅದರ ಮಾಲೀಕನನ್ನೇ ಕೊಂದು ಹಾಕಿದ್ದು, ಎಲ್ಲ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
A photographer from Mysuru who had gone to his native Puttur in Dakshina Kannada district only to go missing is found dead under mysterious circumstances. Jagadish (57) popular as ‘Srushti Jagadish’ had gone to see his lands near Puttur on November 18. As he went missing, a police complaint had been lodged in this regard. Later in the police probe it came to lift that Jagadish was allegedly hacked to death by hammer by his relatives.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am