ಬ್ರೇಕಿಂಗ್ ನ್ಯೂಸ್
26-11-21 12:19 pm HK news Desk ಕ್ರೈಂ
ಮಂಗಳೂರು, ನ.26: ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ನಾಲ್ಕು ದಿನಕ್ಕೆ ಕಸ್ಟಡಿ ಪಡೆದಿದ್ದಾರೆ.

ಮಧ್ಯಪ್ರದೇಶ ಮೂಲದ ಜಯ್ ಬನ್ ಅಲಿಯಾಸ್ ಜೈಸಿಂಗ್, ಮುಕೇಶ್ ಸಿಂಗ್, ಮುನೀಮ್ ಸಿಂಗ್ ಮತ್ತು ಜಾರ್ಖಂಡ್ ಮೂಲದ ಮನೀಶ್ ತಿರ್ಕೆ ಆರೋಪಿಗಳಾಗಿದ್ದು, ನಾಲ್ವರನ್ನೂ ಪೊಲೀಸರು ಮತ್ತೆ ವಿಚಾರಣೆ ಮುಂದುವರಿಸಿದ್ದಾರೆ. ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿರುವ ಇವರಲ್ಲಿ ಮೂವರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ತಿರ್ಕೆಯನ್ನು ಕರೆಸಿಕೊಂಡು ನ.21ರಂದು ಅದೇ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ದಂಪತಿಯ ಎಂಟು ವರ್ಷದ ಪುತ್ರಿಯನ್ನು ತಮ್ಮ ಕೊಠಡಿಗೆ ಹೊತ್ತೊಯ್ದು ಕೃತ್ಯ ಎಸಗಿದ್ದರು.


ಒಬ್ಬನ ನಂತರ ಇನ್ನೊಬ್ಬನಂತೆ ಅತ್ಯಾಚಾರ ಎಸಗಿದ್ದು, ನೋವಿನಿಂದ ಚೀರಾಡಿದ ಬಾಲಕಿಯನ್ನು ಕೊನೆಗೆ ಕತ್ತು ಹಿಸುಕಿ ಕೊಲೆಗೈದಿದ್ದರು. ಶವವನ್ನು ಅಲ್ಲಿಯೇ ಟೈಲ್ಸ್ ಫ್ಯಾಕ್ಟರಿಯ ಒಳಭಾಗದಿಂದ ಹರಿದು ಹೋಗುತ್ತಿದ್ದ ನೀರಿನ ಚರಂಡಿಗೆ ಎಸೆದು ಹೋಗಿದ್ದರು. ಸಂಜೆಯಾಗುತ್ತಿದ್ದಂತೆ ಶವ ಪತ್ತೆಯಾಗಿದ್ದು ಪೈಶಾಚಿಕ ಕೃತ್ಯದ ಬಗ್ಗೆ ಭಾರೀ ಆಕ್ರೋಶ ಎದ್ದಿತ್ತು. ಪೊಲೀಸರು ಟೈಲ್ಸ್ ಫ್ಯಾಕ್ಟರಿಯಲ್ಲಿ 20 ಮಂದಿ ಉತ್ತರ ಭಾರತೀಯ ಕಾರ್ಮಿಕರನ್ನು ವಶಕ್ಕೆ ಪಡೆದು ಬೆಂಡೆತ್ತಿದ್ದಾರೆ. ಎಸಿಪಿ ರಂಜಿತ್ ಬಂಡಾರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ತಮ್ಮನ್ನು ಒಪ್ಪಿಕೊಂಡಿದ್ದರು. ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮತ್ತೆ ನಾಲ್ಕು ದಿನಕ್ಕೆ ಕಸ್ಟಡಿ ಪಡೆದುಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ಹಲವು ಸಂಘಟನೆಗಳು, ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
Four persons who have been accused of committing the macabre act of raping an eight-year-old girl in turns inside the premises of Raj Tiles Factory at Parari near Ulaibettu in the outskirts of the city and strangiulating her to death and then dumpling her body in a drain were arrested by the city police on November 24. The four have been sent to four-day police custody.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm