ಬ್ರೇಕಿಂಗ್ ನ್ಯೂಸ್
26-11-21 03:23 pm HK news Desk ಕ್ರೈಂ
ಲಕ್ನೋ, ನ.26: ದಲಿತ ಸಮುದಾಯಕ್ಕೆ ಸೇರಿದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಆಕೆ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯಲ್ಲಿ ನಡೆದಿದೆ.
16 ವರ್ಷದ ಬಾಲಕಿ ಮತ್ತು ಆಕೆಯ ತಮ್ಮ ಹತ್ತು ವರ್ಷದ ಬಾಲಕ, ತಂದೆ ಮತ್ತು ತಾಯಿ ಎಲ್ಲರೂ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸಂಬಂಧಿಕರ ಪ್ರಕಾರ, ನೆರೆಮನೆಯ ಮೇಲ್ವರ್ಗದ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಅನ್ನುವ ಆರೋಪ ಕೇಳಿಬಂದಿದೆ.

ಕೊಲೆಗೂ ಮುನ್ನ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನುವ ಆರೋಪ ವ್ಯಕ್ತವಾಗಿದೆ. ಅದಕ್ಕೆ ಪೂರಕವಾಗಿ ಬಾಲಕಿಯ ಶವ ಮನೆಯ ಕೋಣೆಯಲ್ಲಿದ್ದರೆ, ಬಾಲಕ ಮತ್ತು ಹೆತ್ತವರ ಶವಗಳು ಮನೆಯ ಹೊರಭಾಗದಲ್ಲಿ ಬಿದ್ದುಕೊಂಡಿತ್ತು. ಪೊಲೀಸರು ಘಟನೆ ಬಗ್ಗೆ ಮರ್ಡರ್ ಮತ್ತು ಗ್ಯಾಂಗ್ ರೇಪ್ ಕಾಯ್ದೆಯಡಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಮನೆಯಲ್ಲಿ ನಾಲ್ವರು ಶವವಾಗಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಹರಿತ ಆಯುಧಗಳಿಂದ ಕಡಿದು ಕೊಲೆಗೈದ ರೀತಿ ಇತ್ತು. ನೆರೆಮನೆಯವರು ಮತ್ತು ಸಂತ್ರಸ್ತದ ಕುಟುಂಬದ ನಡುವೆ ಜಾಗದ ವಿಚಾರದಲ್ಲಿ ತಕರಾರು ಇತ್ತು. ಈ ಬಗ್ಗೆ ಕಳೆದ ಸೆಪ್ಟಂಬರ್ ತಿಂಗಳಲ್ಲೂ ಇದೇ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿತ್ತು. ಆನಂತರ ಪೊಲೀಸರು ರಾಜಿ ಪಂಚಾಯಿತಿ ಮೂಲಕ ವಿವಾದ ಬಗೆಹರಿಸಿದ್ದರು.
ಪೊಲೀಸರು ಆರೋಪಿಗಳ ಪರವಾಗಿಯೇ ಇದ್ದಾರೆ. ಕಳೆದ ಬಾರಿ ಹಲ್ಲೆ ಆದಾಗಲೂ ಎಫ್ಐಆರ್ ದಾಖಲು ಮಾಡಿರಲಿಲ್ಲ. ಈಗಲೂ ಪೊಲೀಸರು ರಾಜಿಯಲ್ಲಿ ಪ್ರಕರಣ ಮುಗಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂತ್ರಸ್ತ ಕುಟುಂಬದ ಸಂಬಂಧಿಕರು ಆರೋಪಿಸಿದ್ದಾರೆ. ಸಂತ್ರಸ್ತ ಕುಟುಂಬದ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದು, ಚುನಾವಣೆ ಎದುರಿಸುವ ರಾಜ್ಯದಲ್ಲಿ ಮತ್ತೆ ಕಾನೂನು ಸುವ್ಯವಸ್ಥೆಯ ಪ್ರಶ್ನೆ ಎತ್ತಿದ್ದಾರೆ.
Four members of a family in Uttar Pradesh's Prayagraj, including a 16-year-old girl and a 10-year-old boy, were found murdered at their home on Thursday morning. Relatives of the family, which belongs to a Scheduled Caste, have claimed the girl could have been raped before her death, and they have accused a neighbouring family, which belongs to the so-called "upper caste", of the crime.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm