ಬ್ರೇಕಿಂಗ್ ನ್ಯೂಸ್
27-11-21 01:50 pm HK Desk news ಕ್ರೈಂ
ಮಂಗಳೂರು, ನ.27: ನಗರ ವ್ಯಾಪ್ತಿಯ ಕುಳೂರು ಮತ್ತು ಕೋಡಿಕಲ್ ನಲ್ಲಿ ನಾಗನ ಕಲ್ಲಿಗೆ ಹಾನಿಗೈದು ಧ್ವಂಸಗೈದ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ.
ಮಹತ್ವದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾವೂರು ನಿವಾಸಿ ಸಫ್ವಾನ್ , ಮೊಹಮ್ಮದ್ ಸುಹೈಲ್ , ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಸುರತ್ಕಲ್ ನ ಜಯಂತ್ ಕುಮಾರ್, ಬಂಟ್ವಾಳದ ಪ್ರತೀಕ್, ಬೇಲೂರಿನ ಮಂಜುನಾಥ್ , ಹಾಸನ ನಿವಾಸಿ ನೌಷಾದ್ ಬಂಧಿತ ಆರೋಪಿಗಳು.
ನಾಗದೇವರ ಮೂರ್ತಿ ಭಗ್ನಗೊಳಿಸಿ ಕೋಮು ಗಲಭೆ ಸೃಷ್ಟಿಸಿ ಶಾಂತಿ ಕದಡುವ ಸಂಚು ರೂಪಿಸಿದ್ದು ಬಯಲಾಗಿದೆ. ಸರಣಿ ಸರಗಳ್ಳತನ, ದರೋಡೆ ಪ್ರಕರಣಗಳ ಹಿಂದೆ ಬಿದ್ದ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಸಂಚು ನಡೆಸಿದ್ದರು. ಆಮೂಲಕ ನಾಗದೇವರ ಕಲ್ಲಿಗೆ ಹಾನಿ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಸಂಚು ಹೂಡಿದ್ದರು.
ಘಟನೆ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಕೋಡಿಕಲ್ ನಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳ ಬಂಧನಕ್ಕೆ 20 ದಿನಗಳ ಗಡುವು ನೀಡಿದ್ದವು. ಪೊಲೀಸರಿಗೆ ಸವಾಲಾಗಿದ್ದರಿಂದ ಮಂಗಳೂರು ಕಮಿಷನರ್ ಶಶಿಕುಮಾರ್, ಮೂಲ್ಕಿ, ಮೂಡುಬಿದ್ರೆ, ಪಣಂಬೂರು, ಕಾವೂರು ಠಾಣೆ ಸೇರಿ 40 ಮಂದಿ ಪೊಲೀಸ್ ಸಿಬಂದಿಯ ತಂಡ ರಚಿಸಿದ್ದರು.
ಪ್ರವೀಣ್ ಮೊಂತೇರೊ ಈ ಹಿಂದೆ ಡಕಾಯಿತಿ, ದರೋಡೆ ಪ್ರಕರಣ ಎದುರಿಸುತ್ತಿದ್ದ ಆರೋಪಿಯಾಗಿದ್ದ. ಆರೋಪಿಗಳು ಜೈಲಿನಲ್ಲಿದ್ದ ವೇಳೆ ಇವರ ನಡುವೆ ಸಂಪರ್ಕ ಆಗಿದ್ದರು. ಸರಗಳ್ಳತನದ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದ ಇಶಾನ್, ಅಚ್ಚಿ ಎಂಬವರ ಸೂಚನೆಯಂತೆ ಕೃತ್ಯಕ್ಕೆ ಸಂಚು ಹೆಣೆಯಲಾಗಿತ್ತು.
ಕಾವೂರಿನ ಸಫಾನ್ ಮತ್ತು ಸೊಹೇಲ್ ಸೇರಿಕೊಂಡು ಹಿಂದುಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿ ನಾಗಬನ ಸೇರಿ, ಧಾರ್ಮಿಕ ಕೇಂದ್ರಗಳ ಅಪವಿತ್ರಗೊಳಿಸಲು ಸಂಚು ನಡೆಸಿದ್ದರು. ಸಫ್ವಾನ್ ತನ್ನ ಸ್ನೇಹಿತ ಪ್ರವೀಣ್ ಮೊಂತೇರೊ ಮೂಲಕ ಹತ್ತು ಸಾವಿರಕ್ಕೆ ಡೀಲ್ ಮಾಡಿದ್ದರು. ಹಣ ಪಡೆದು ಕುಳೂರು ಮತ್ತು ಕೋಡಿಕಲ್ ನಾಗಬನಕ್ಕೆ ಹಾನಿ ಎಸಗಿದ್ದಾಗಿ ಒಪ್ಪಿಕೊಂಡಿದ್ದಾರೆ.
ಕೋಡಿಕಲ್ ನಾಗಬನದ ಎಲ್ಲ ನಾಗನ ಕಲ್ಲುಗಳನ್ನು ತೆಗೆಯಲು ಮುಂದಾಗಿದ್ದರು. ಮತ್ತೆ ಹೋಗಿದ್ದಾಗ ಅಲ್ಲಿನ ನಾಯಿ ಬೊಗಳಿದ್ದರಿಂದ ಇತರೇ ಕಲ್ಲುಗಳನ್ನು ಹಾನಿ ಮಾಡಲು ಸಾಧ್ಯವಾಗಿರಲಿಲ್ಲ. ಪ್ರಕರಣದಲ್ಲಿ ಆರೋಪಿಗಳಿಗೆ ಪರೋಕ್ಷ ಬೆಂಬಲ ನೀಡಿದ ಇನ್ನೂ ಹಲವರು ಇದ್ದಾರೆ, ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
In connection with the incidents at Kulur and Kodikal in the city where sacrilegious acts were committed in the Naga Banas where stone forms of the serpent gods are consecrated, the police have arrested eight persons. The arrested are identified as Safwan (25), Sohaib (23) and Nikilesh (22) from Kavoor, Praveen Anil Monteiro (27) from Panjimogaru, Jayanth Kumar (30) from Surathkal, Prathik (24) from Bantwal, Manjunath (30) from Kulur and Naushad (30) from Hassan.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm