ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm