ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.

ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm