ಬ್ರೇಕಿಂಗ್ ನ್ಯೂಸ್
29-11-21 08:14 pm HK Desk news ಕ್ರೈಂ
ಬೆಂಗಳೂರು, ನ.29: ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಪಡೆದು ಅಟ್ಯಾಚ್ ಮಾಡಿಸಿಕೊಂಡು 10 ಕೋಟಿಗೂ ಹೆಚ್ಚು ಮೌಲ್ಯದ 130 ಕಾರುಗಳೊಂದಿಗೆ ವಂಚಕನೊಬ್ಬ ಪರಾರಿಯಾದ ಘಟನೆ ನಡೆದಿದ್ದು ವಂಚನೆಗೆ ಒಳಗಾದವರು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮಿಳುನಾಡು ಮೂಲದ ಶಿವಕುಮಾರ್ ನಾಪತ್ತೆಯಾಗಿರುವ ವಂಚಕನಾಗಿದ್ದು ಬೆಂಗಳೂರಿನ ನಾಗಸಂದ್ರದಲ್ಲಿ ಕಳೆದ ಒಂದು ವರ್ಷದ ಹಿಂದೆ ಆರ್ಎಸ್ ಟ್ರಾವೆಲ್ಸ್ ಹೆಸರಲ್ಲಿ ಏಜನ್ಸಿ ಆರಂಭಿಸಿದ್ದ. ಟ್ರಾವೆಲ್ಸ್ ಹೆಸರಲ್ಲಿ ಕಾರುಗಳನ್ನು ಬಾಡಿಗೆ ಕೊಡುತ್ತಿದ್ದು ಇದಕ್ಕಾಗಿ 130ಕ್ಕೂ ಹೆಚ್ಚು ವಿವಿಧ ಮಾದರಿಯ ಕಾರುಗಳನ್ನು ಅಟ್ಯಾಚ್ ಮಾಡಿಸಿಕೊಂಡಿದ್ದ. ಪ್ರತಿ ತಿಂಗಳ 8 ರಂದು ಅಟ್ಯಾಚ್ ಮಾಡಿದ್ದ ಕಾರು ಮಾಲೀಕರ ಅಕೌಂಟಿಗೆ ಬಾಡಿಗೆ ಹಣವನ್ನೂ ಹಾಕುತ್ತಿದ್ದ.
ವ್ಯವಹಾರದಲ್ಲಿ ನಂಬಿಕೆ ಮೂಡಿದ್ದರಿಂದ ಹೆಚ್ಚು ಕಾರುಗಳನ್ನು ಅಟ್ಯಾಚ್ ಮಾಡಲಾಗಿತ್ತು. ಇದರಲ್ಲಿ ಐಷಾರಾಮಿ ಕಾರು ಸೇರಿದಂತೆ ಇನೋವಾ, ಇಟಿಯೋಸ್, ಸ್ವಿಫ್ಟ್ ನಂತಹ ಕಾರುಗಳನ್ನೂ ಬಾಡಿಗೆಗೆ ಬಿಡಲಾಗಿತ್ತು. ಆದ್ರೆ ಈ ತಿಂಗಳು ಹಣ ಹಾಕಿರಲಿಲ್ಲ.
ಕಾರು ಮಾಲೀಕರು ಈ ಬಗ್ಗೆ ವಿಚಾರಿಸಲು ಶಿವಕುಮಾರ್ ಮೊಬೈಲ್ ಗೆ 3-4 ಬಾರಿ ಕರೆ ಮಾಡಿದ್ದರು. ಸ್ವೀಕರಿಸದೇ ಇದ್ದರಿಂದ ಅನುಮಾನಗೊಂಡ ಕಾರು ಮಾಲೀಕರು ಟ್ರಾವೆಲ್ಸ್ ಬಳಿ ಬಂದು ನೋಡಿದಾಗ ಕಚೇರಿಗೆ ಬೀಗ ಹಾಕಲಾಗಿತ್ತು.
ಆನಂತರ, ಒಬ್ಬೊಬ್ಬರೇ ಟ್ರಾವಲ್ಸ್ ಬಳಿ ಬಂದು ವಿಚಾರಿಸಿದಾಗ ಕಳೆದೊಂದು ವಾರದಿಂದ ಟ್ರಾವಲ್ಸ್ ಗೆ ಬೀಗ ಹಾಕಿರುವ ವಿಚಾರ ತಿಳಿದುಬಂದಿತ್ತು. ತಾವು ಮೋಸ ಹೋಗಿರುವುದನ್ನು ಅರಿತು ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಬರೋಬ್ಬರಿ 130ಕ್ಕೂ ಹೆಚ್ಚು ಕಾರುಗಳೊಂದಿಗೆ ಎಸ್ಕೇಪ್ ಆಗಿದ್ದಾನೆ. ಸದ್ಯ ಕಾರುಗಳನ್ನ ಅಟ್ಯಾಚ್ ಮಾಡಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಬಗಲಗುಂಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.
Man fless with 130 taxi cars in Banagalore. The worth of 130 cars is said to be more than 10 crores.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm