ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am