ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm