ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm