ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm