ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am