ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm