ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm