ಬ್ರೇಕಿಂಗ್ ನ್ಯೂಸ್
30-11-21 02:28 pm HK Desk news ಕ್ರೈಂ
ಬೆಂಗಳೂರು, ನ.30: ಓಮಿಕ್ರಾನ್ ರೂಪಾಂತರಿ ವೈರಸ್ ಬರದಂತೆ ಲಸಿಕೆ ನೀಡಲು ಬಂದಿರುವುದಾಗಿ ವೈದ್ಯರ ಸೋಗಿನಲ್ಲಿ ಬಂದಿದ್ದ ತಂಡವೊಂದು ಮನೆಯವರಿಗೆ ಪಿಸ್ತೂಲ್ ತೋರಿಸಿ ದರೋಡೆ ನಡೆಸಿರುವ ಘಟನೆ ಯಶವಂತಪುರದ ಎಸ್ ಬಿಎಂ ಕಾಲನಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಒಂದು ಕಾರು ಮತ್ತು ಇನ್ನೊಂದು ಬೈಕಿನಲ್ಲಿ ನಾಲ್ವರು ಬಂದಿದ್ದರು. ಉತ್ತರ ಭಾರತ ಮೂಲದ ಸಂಪತ್ ಸಿಂಗ್ ಎಂಬವರ ಮನೆಗೆ ಬಂದಿದ್ದ ತಂಡ, ನಿಮಗೆ ಕೊರೊನಾ ಲಸಿಕೆ ಆಗಿದೆಯೇ ಎಂದು ಕೇಳಿದ್ದಾರೆ. ಲಸಿಕೆ ತಗೊಂಡಿದ್ದೇವೆ ಎಂದಿದ್ದಕ್ಕೆ ಈಗ, ಹೊಸ ವೈರಸ್ ಬಂದಿರುವುದಕ್ಕೆ ಮತ್ತೊಂದು ಲಸಿಕೆ ನೀಡಲು ಬಂದಿದ್ದೇವೆ ಎಂದು ಹೇಳಿ ಮನೆಯ ಒಳಗೆ ಬಂದಿದ್ದಾರೆ.
ಮನೆಯಲ್ಲಿ ಸಂಪತ್ ಸಿಂಗ್ ಪತ್ನಿ ಪಿಸ್ತಾ ದೇವಿ ಮತ್ತು ಸೊಸೆ ರಕ್ಷಾ ಮಾತ್ರ ಇದ್ದರು. ಪಿಸ್ತಾ ದೇವಿ ಗಂಡನಿಗೆ ಕರೆ ಮಾಡಲೆಂದು ಮೊಬೈಲ್ ತೆಗೆಯುವಷ್ಟರಲ್ಲಿ ಅವರಲ್ಲಿ ಒಬ್ಬಾತ ಆಕೆಯ ಹಣೆಗೆ ರಿವಾಲ್ವರ್ ಇಟ್ಟಿದ್ದಾನೆ. ಕೂಡಲೇ ಅವರಿಬ್ಬರನ್ನೂ ಮನೆಯ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ಬಳಿಕ ಮನೆಯ ಕಪಾಟಿನಲ್ಲಿದ್ದ 50 ಗ್ರಾಮ್ ಚಿನ್ನವನ್ನು ಲೂಟಿ ಮಾಡಿದ್ದಾರೆ. ಇದೇ ವೇಳೆ, ಪಿಸ್ತಾ ದೇವಿಯವರ ಇನ್ನೊಬ್ಬ ಮಗ ವಿಕ್ರಂ ಸಿಂಗ್ ಎಂಬಾತ ಈ ವಿಚಾರ ತಿಳಿಯದೆ ನೇರವಾಗಿ ಮನೆಗೆ ಬಂದಿದ್ದಾನೆ.
ಮನೆಯಲ್ಲಿ ನೋಡಿದರೆ, ನಾಲ್ಕು ಮಂದಿ ವೈದ್ಯರ ಸೋಗಿನಲ್ಲಿದ್ದರು. ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಹಾಕಿದ್ದವರು, ನಿನಗೆ ಲಸಿಕೆ ಆಗಿದೆಯಾ ಎಂದು ಕೇಳಿದ್ದಾರೆ. ನನಗೆ ಲಸಿಕೆ ಆಗಿದೆ ಎನ್ನುತ್ತಲೇ ತಾಯಿಯನ್ನು ಕರೆಯುತ್ತಾ ಮನೆಯ ಕೋಣೆಯೊಳಗೆ ಹೋಗಿದ್ದಾನೆ. ಅಷ್ಟರಲ್ಲಿ ಆಗಂತುಕರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.
Burglars come as Doctors stating to give Omicron Virus vaccine, show guns and flee with costly items. A case has been registered at Yeshwantpur Police Station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm