ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm