ಬ್ರೇಕಿಂಗ್ ನ್ಯೂಸ್
30-11-21 06:11 pm HK Desk news ಕ್ರೈಂ
ಬೆಂಗಳೂರು, ನ.30: ನಗರದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾದಕ ವಸ್ತು ಪತ್ತೆಮಾಡಿ ವಶಪಡಿಸಿಕೊಂಡಿದ್ದಾರೆ.
ಕಾರಾಗೃಹದಲ್ಲಿದ್ದುಕೊಂಡೇ ರೌಡಿಗಳು,ಖೈದಿಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಾರೆ. ಕಾರಾಗೃಹ ಅಕ್ರಮಗಳ ಅಡ್ಡೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಕಾನೂನು ಬಾಹಿರ ವ್ಯವಹಾರಗಳು ನಡೆಯುತ್ತಿವೆ ಎಂಬ ಮಾಹಿತಿ ಮೇರೆಗೆ ಈ ದಾಳಿ ಮಾಡಲಾಗಿದೆ.
ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕಾರಾಗೃಹದ ಕೆಲವು ಬ್ಯಾರಕ್ ಗಳಲ್ಲಿ ಗಾಂಜಾ ಪ್ಯಾಕೇಟ್ಗಳು, ಗಾಂಜಾ ಸೇದುವ ಪೈಪ್ಗಳು ಪತ್ತೆಯಾಗಿವೆ. ಹೀಗಾಗಿ ಕಾರಾಗೃಹದ ಮೂಲೆ ಮೂಲೆಯಲ್ಲಿಯೂ ಶೋಧ ನಡೆಸಿದ್ದಾರೆ. ಸಿಸಿಬಿ ಪೋಲೀಸರು ಮತ್ತು ಕಾರಾಗೃಹದ ಅಧಿಕಾರಿಗಳು ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ರೌಡಿಗಳು ಜೈಲಿನಲ್ಲಿದ್ದು ಕೊಂಡೇ ತಮ್ಮ ಸಹಚರರ ಮೂಲಕ ನಗರದಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ , ಬೆದರಿಕೆ, ಹಫ್ತಾ ವಸೂಲಿ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಸಿಸಿಬಿ ಪೋಲಿಸರು ಈ ದಾಳಿ ನಡೆಸುವ ಮೂಲಕ ರೌಡಿಗಳಿಗೆ , ಖೈದಿಗಳ ಹಾಗೂ ವಿಚಾರಾಣಾೀನ ಖೈದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರಾಗೃಹದಲ್ಲಿ ನಡೆಯುವ ಅಕ್ರಮ ಚಟುವಟಿಕೆ ನಿಯಂತ್ರಿಸಲು ಈ ದಾಳಿ ನಡೆದಿದೆ. ಆಗಾಗ್ಗೆ ಈ ರೀತಿಯ ದಾಳಿ ನಡೆಯುತ್ತಿದ್ದು ,ಕೆಲವು ಖೈದಿಗಳು, ರೌಡಿಗಳು ಹಾಗೂ ವಿಚಾರಣಾೀನ ಖೈದಿಗಳ ಮೇಲೆ ಜೈಲು ಅಧಿಕಾರಿಗಳು ನಿಗಾ ಇಟ್ಟಿರುತ್ತಾರೆ ಎಂದು ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
ಅಪರಾಧ ವಿಭಾಗದ ಜಂಟಿ ಪೋಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು ಮೂವರು ಎಸಿಪಿ ಮತ್ತು 15 ಮಂದಿ ಇನ್ಸ್ಪೆಕ್ಟ್ರ್ಗಳು ಕಾರಾಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.
ಕೆಲವು ಬ್ಯಾರಕ್ಗಳಲ್ಲಿ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಸಿಸಿಬಿ ಪೋಲೀಸರು ದೂರು ನೀಡಿದ್ದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Ccb police raid on Bangalore Central jail after inmates involved in criminal activities operating from the jail. The raid was based on information received.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am