ಬ್ರೇಕಿಂಗ್ ನ್ಯೂಸ್
30-11-21 07:00 pm HK Desk news ಕ್ರೈಂ
Photo credits : Headline Karnataka
ಮಂಗಳೂರು, ನ.30: ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬ ಪಂಚಾಯತ್ ಅಧ್ಯಕ್ಷರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಕಂದಾವರ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಕೈಕಂಬ ಬಳಿಯ ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಉಮೇಶ್ ಮೂಲ್ಯ ಇಂದು ಮಧ್ಯಾಹ್ನ ಪಿಡಿಓ ಯಶವಂತ ಕಚೇರಿಗೆ ತೆರಳಿ, ಪಂಚಾಯತ್ ನಿರ್ಣಯ ಪುಸ್ತಕವನ್ನು ಕೇಳಿದ್ದಾರೆ. ಆದರೆ, ಪಿಡಿಓ ಅಧಿಕಾರಿ ಪುಸ್ತಕವನ್ನು ನೀಡಲು ನಿರಾಕರಿಸಿದ್ದಾರೆ. ಅದಕ್ಕೆ ನಮಗೆ ಪಂಚಾಯತ್ ನಿರ್ಣಯ ಪುಸ್ತಕವನ್ನು ಪಡೆಯುವುದಕ್ಕೂ ಅಧಿಕಾರ ಇಲ್ಲವೇ ಎಂದು ಪಂಚಾಯತ್ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಪಿಡಿಓ ಯಶವಂತ್, ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯರನ್ನು ದೂಡಿ ಹಾಕಿದ್ದು ಮುಖಕ್ಕೆ ಗುದ್ದಿದ್ದಾರೆ ಎನ್ನಲಾಗಿದೆ. ಇದರ ಪೆಟ್ಟಿಗೆ ಉಮೇಶ್ ಮೂಲ್ಯ ನೆಲಕ್ಕೆ ಬಿದ್ದಿದ್ದು, ಗಲ್ಲಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪಂಚಾಯತ್ ಸದಸ್ಯರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪಿಡಿಓ ಯಶವಂತ್ ಹಿಂದಿನಿಂದಲೂ ಸಾರ್ವಜನಿಕರು ಮತ್ತು ಪಂಚಾಯತ್ ಸದಸ್ಯರ ಜೊತೆ ದುರ್ವರ್ತನೆ ತೋರುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಂಚಾಯತ್ ನಲ್ಲಿ ಯಾವುದೇ ವಿಚಾರದ ಬಗ್ಗೆ ಮಾಹಿತಿ ಕೇಳಿದರೂ, ಆತ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಕೆಲವು ಪಂಚಾಯತ್ ಸದಸ್ಯರು ಸೇರಿ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೋನ್ ಮಾಡಿದ್ದಾಗ, ಪಿಡಿಓ ಯಶವಂತ್ ಉಲ್ಟಾ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದೀಗ ಬಿಜೆಪಿ ಆಡಳಿತದ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ನಡೆಸಿ ಪಿಡಿಓ ಮತ್ತೆ ಸುದ್ದಿಯಾಗಿದ್ದಾರೆ.
Mnagalore Kandavara panchayat President assaulted by PDO in office. President Umesh when asked of a record book from Pdo Yashwant. Pdo who refused to give the book started to fight and that landed to assault.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am